ಕಾಂಗ್ರೆಸ್ ನಿಂದ ರಾಮ ಭಕ್ತರನ್ನು ಹೆದರಿಸುವ ಕೆಲಸ
ದಾವಣಗೆರೆ:ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ರಾಮ ಭಕ್ತರನ್ನು ಹೆದರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಕರ ಸೇವಕನ ಬಂಧನ ಖಂಡಿಸಿ ಹುಬ್ಬಳಿಗೆ ಪ್ರತಿಭಟನೆಗೆ ತೆರಳುವ ಮುನ್ನ ದಾವಣಗೆರೆಯ ಜಿಎಂಐಟಿ ಗೆಸ್ಟ್ ಹೌಸ್ಗೆ ಭೇಟಿಕೊಟ್ಟಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಇಡೀ ದೇಶ ರಾಮ ಭಕ್ತರು ಸಂತೋಷದಿAದ ಇದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಮಭಕ್ತರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ರಾಜ್ಯದಲ್ಲಿ ಗಲಭೆ ಸೃಷ್ಠಿಗೆ […]







































































































































































































































































































































































































































































































































































































































































































































































































































































































































































































































































































































