September 16, 2026

ತೆಲಂಗಾಣ ಅಧಿಕಾರಿಯ ಮನೆ, ಕಚೇರಿಗಳಿಗೆ ACB ದಾಳಿ- 100 ಕೋಟಿಗೂ ಅಧಿಕ ಆಸ್ತಿ ಪತ್ತೆ

ಹೈದರಾಬಾದ್: ತೆಲಂಗಾಣ ರಾಜ್ಯ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ನಿರ್ದೇಶಕ ಶಿವ ಬಾಲಕೃಷ್ಣ ಅವರ ಒಟ್ಟು 100 ರೂ. ಕೋಟಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಪತ್ತೆ ಮಾಡಿದೆ . ಎಸಿಬಿಯ ಪ್ರಾಥಮಿಕ ವರದಿಗಳ ಪ್ರಕಾರ, ಬಾಲಕೃಷ್ಣ ಹಲವಾರು ರಿಯಲ್ ಎಸ್ಟೇಟ್ ಕಂಪನಿಗಳಿಗೆ ಅನುಮತಿ ನೀಡುವ ಮೂಲಕ ಕೋಟಿಗಳನ್ನು ಗಳಿಸಿದ್ದಾರೆ ಎನ್ನಲಾಗಿದೆ.  ಬಾಲಕೃಷ್ಣ ಅವರು ತಮ್ಮ ಆದಾಯದ ಮೂಲಗಳನ್ನು ಮೀರಿ ಆಸ್ತಿಯನ್ನು ಸಂಗ್ರಹಿಸಿದ್ದಾರೆ ಎಂಬ […]

ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ – ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಡಿಕ್ಕಿಯಾದ ಪರಿಣಾಮ ಮೂವರು ಪುಟಾಣಿ ಮಕ್ಕಳು ಸಹಿತ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಮೃತರನ್ನು ಲಿಂಗಪ್ಪ (26), ಸಿಂಧುಶ್ರೀ (2), ಹಯ್ಯಾಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಎಂದು ಗುರುತಿಸಲಾಗಿದೆ. ಅಪಘಾತಕ್ಕೀಡಾದವರೆಲ್ಲರೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದ ಕೂಲಿ ಕಾರ್ಮಿಕರಾಗಿದ್ದು, ಕೆಲಸಕ್ಕಾಗಿ ಬೆಂಗಳೂರಿನತ್ತ ಪಯಣ ಬೆಳೆಸಿದ್ದರು. ಒಂದೇ ಕುಟುಂಬದ ಕಾರ್ಮಿಕರಾಗಿದ್ದು, ತಮ್ಮ ಮಕ್ಕಳ […]

ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಜೊತೆಗಿನ ಕಾಂಗ್ರೆಸ್ ಶಾಸಕನ ಫೋಟೋ ವೈರಲ್

ಕಲಬುರಗಿ: ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ್ದ ಪ್ರಕರಣ‌ ಸಂಬಂಧ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದು ಕಾಂಗ್ರೆಸ್ ಕಾರ್ಯಕರ್ತನಾ? ಎಂಬ ಪ್ರಶ್ನೆ ಎದ್ದಿದೆ. ಆರೋಪಿ ಸಂಗಮೇಶ, ಶಾಸಕ ಅಲ್ಲಮಪ್ರಭು ಪಾಟೀಲ್ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಲಬುರಗಿ ನಗರದ ಹೊರವಲಯದ ಕೊಟನೂರು ಡಿ ಗ್ರಾಮದ ಬಳಿ ಡಾ. ಬಿಆರ್ ಅಂಬೇಡ್ಕರ್ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. 26 ವರ್ಷದ ಕಿರಣ್, 25 ವರ್ಷದ ಹನುಮಂತ, […]

ಪೀಣ್ಯ – ನಾಗಸಂದ್ರ ನಡುವೆ ಮೂರು ದಿನ ಮೆಟ್ರೋ ರೈಲು ಸಂಚಾರ ಸ್ಥಗಿತ

ಬೆಂಗಳೂರು: ಪೀಣ್ಯ ಸುತ್ತ ಮುತ್ತಲಿನ ಹಾಗೂ ಹಸಿರು ಮಾರ್ಗದಲ್ಲಿ ಪ್ರಯಾಣಿಸುವ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬ್ಯಾಡ್ ನ್ಯೂಸ್ ನೀಡಿದೆ. ಪೀಣ್ಯ ಹಾಗೂ ನಾಗಸಂದ್ರದ ನಡುವೆ ಮೂರು ದಿನ ಮೆಟ್ರೋ ರೈಲು ಸೇವೆ ಸ್ಥಗಿತಗೊಳ್ಳಲಿದೆ. ನಾಗಸಂದ್ರದಿಂದ ಮಾದವಾರ ವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಾಗಾರಿ ನಡೆಯಲಿರುವ ಕಾರಣ ಶುಕ್ರವಾರದಿಂದ ಮೂರು ದಿನ ಮೆಟ್ರೋ ಸೇವೆ ತಾತ್ಕಲಿಕ ಸ್ಥಗಿತಗೊಳ್ಳಲಿದೆ. ಜನವರಿ 26 ರಿಂದ ಜನವರಿ 28ರ ತನಕ ಮೆಟ್ರೋ ರೈಲು ಸಂಚಾರ ತಾತ್ಕಲಿಕ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ. ಜನವರಿ 29ರ ಬೆಳಗ್ಗೆ […]

ಉತ್ತರ ಕನ್ನಡ ಜಿಲ್ಲಾ BJP ಪ್ರಧಾನ ಕಾರ್ಯದರ್ಶಿ ನೇಮಕ ಸಭೆಯಲ್ಲಿ ವಾಗ್ವಾದ; ಹೊರನಡೆದ ಅನಂತ್​ ಕುಮಾರ್ ಹೆಗಡೆ

ಕಾರವಾರ: ಆರೋಗ್ಯದ ಕಾರಣ ನೀಡಿ ನಾಲ್ಕು ವರ್ಷ ಜನರ ಕೈಗೆ ಸಿಗದಿದ್ದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಸಂಸದರ ನಿರ್ಧಾರಕ್ಕೆ ಸ್ವಪಕ್ಷದಲ್ಲೇ ಮಣ್ಣನೆ ಸಿಗುತ್ತಿಲ್ಲ ಎಂಬ ಅಂಶ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ನೇಮಕ ಮಾಡುವ ಸಭೆಯಿಂದಾಗಿ ಹೊರಬಿದ್ದಿದೆ. ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ನೇಮಕ ಮಾಡುವ ಸಭೆ ಜನವರಿ 23 ರಂದು ನಡೆದಿದ್ದು, ಈ […]

ಸಾರ್ವಜನಿಕವಾಗಿಯೇ ಸೆಕ್ಸ್: ಬುದ್ದಿ ಹೇಳಲು ಹೋದ ಎಸ್‌ಐ ಗಂಭೀರ

ಬೆಂಗಳೂರು:ಜೋಡಿಯೊಂದು ಮಟ ಮಟ ಮಧ್ಯಾಹ್ನವೇ ಕಾರಿನಲ್ಲೇ ಬೆತ್ತಲಾಗಿ ಕಾಮತೃಷೆ ತೀರಿಸಿಕೊಳ್ಳಲು ಮುಂದಾದ ವಿಲಕ್ಷಣ ವಿದ್ಯಮಾನ ಬೆಂಗಳೂರಿನ ಉದ್ಯಾನವೊಂದರ ಬಳಿ ನಡೆದಿದೆ. ಇದೇ ವೇಳೆ, ದೃಶ್ಯ ಕಂಡು ಬುದ್ಧಿಹೇಳಲು ಬಳಿ ತೆರಳಿದ ಪೊಲೀಸ್ ಮೇಲೆಯೆ ಕಾರು ಚಲಾಯಿಸಿಕೊಂಡು ಜೋಡಿ ಪರಾರಿಯಾಗಿದೆ. ಗಾಯಗೊಂಡ ಸಬ್‌ಇನ್‌ಸ್ಪೆಕ್ಟರ್ ಮಹೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ನಡೆದಿದ್ದೇನು?ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉದ್ಯಾನವನವೊಂದರ ಬಳಿ ಕಿಯೋ ಸೆಲಾಟೋಸ್ ಕಾರಿನಲ್ಲಿ ಬಂದಿದ್ದ ಜೋಡಿಯೊಂದು ಅಲ್ಲೇ ಬಟ್ಟೆಬಿಚ್ಚಿ ಕಾಮಕೇಳಿ ಆರಂಭಿಸಿದೆ. ಪಾರ್ಕ್ನಲ್ಲಿ ಅನೇಕ ಮಂದಿ ಇದ್ದರೂ, […]

ನಳಿನ್ ಕುಮಾರ್ ಕಟೀಲ್‌ಗೆ ಟಿಕೆಟ್ ಡೌಟ್ಟಿಕೆಟ್ ರೇಸ್‌ನಲ್ಲಿ ಬ್ರಿಜೇಶ್ ಚೌಟಾ

ಮಂಗಳೂರು:ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ಹಿಡಿತದಿಂದ ತಪ್ಪಿ ಹಲವು ವರ್ಷಗಳೇ ಕಳೆದಿವೆ. ಸದ್ಯ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ನಳಿನ್ ಕುಮಾರ್ ಕಟೀಲ್ ಸಂಸದರಾಗಿರುವ ದಕ್ಷಿಣ ಕನ್ನಡದಲ್ಲಿ ಹೊಸ ಮುಖವನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ನೋಡುವುದಾದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು ಬಿಜೆಪಿ ಟಿಕೆಟ್ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಆದರೆ ಈ ಬಾರಿ ಅವರಿಗೆ ಟಿಕೆಟ್ ಕೈ […]

ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಶೀಘ್ರ ಫೈನಲ್

ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಶೀಘ್ರ ಅಂತಿಮಗೊಳ್ಳಲಿದೆ. ಜನವರಿ ೨೭ರ ನಂತರ ದೆಹಲಿಯಲ್ಲಿ ಉಭಯ ಪಕ್ಷಗಳ ನಾಯಕರು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈಗಾಗಲೇ ಕ್ಷೇತ್ರದ ಹಂಚಿಕೆ ಕುರಿತು ಎರಡು ಸುತ್ತಿನ ಸಭೆ ನಡೆಸಿದ್ದಾರೆ. ಬಿಜೆಪಿ ನಾಯಕರ ಜೊತೆ ಹೆಚ್‌ಡಿ ಕುಮಾರಸ್ವಾಮಿ ಎರಡು ಸುತ್ತಿನ ಚರ್ಚೆ ಮಾಡಿದ್ದಾರೆ.ನಾಲ್ಕು ಕ್ಷೇತ್ರಗಳ ಬದಲು 3 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಜೆಡಿಎಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಅದೇ ರೀತಿ, […]

ರಿಯಾಯಿತಿ ದರದಲ್ಲಿ ಅಯೋಧ್ಯೆಗೆ ಟೂರ್ ಪ್ಲ್ಯಾನ್ಬಿಜೆಪಿಗೆ ಕಾಂಗ್ರೆಸ್ ಟಕ್ಕರ್

ಬೆಂಗಳೂರು:ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಅಯೋಧ್ಯೆಗೆ ರಾಮಭಕ್ತರನ್ನು ಕರೆದುಕೊಂಡು ಹೋಗುವ ಪ್ಲ್ಯಾನ್ ರೂಪಿಸಿದೆ. ಇದಕ್ಕೆ ಠಕ್ಕರ್ ಕೊಡಲು ಈಗ ಕಾಂಗ್ರೆಸ್ ಸರ್ಕಾರವೂ ಸಜ್ಜಾಗಿದೆ.ಈಗಾಗಲೇ ಮುಜರಾಯಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ಕಾಶಿ ರೈಲು ಯಾತ್ರೆ ಇದೆ. ರಿಯಾಯಿತಿ ದರದಲ್ಲಿ ಕಾಶಿ ಸೇರಿದಂತೆ ಅನೇಕ ಪುಣ್ಯ ಕ್ಷೇತ್ರಗಳಿಗೆ ಜನರು ಬುಕ್ ಮಾಡಿ ಹೋಗಬಹುದಾಗಿದೆ. ಈಗ ಈ ಪ್ಲಾನ್‌ನಲ್ಲಿ ಮುಜರಾಯಿ ಇಲಾಖೆಯು ಅಯೋಧ್ಯೆಯನ್ನು ಕೂಡ ಸೇರಿಸಿಕೊಳ್ಳಲಿದೆ.ಮಾರ್ಚ್ನಲ್ಲೇ ಯಾತ್ರೆ ಭಾಗ್ಯ: ಸದ್ಯ ಈಗ ವಿಪರೀತ ಚಳಿ ಇರೋದ್ರಿಂದ ಮಾರ್ಚ್ನಲ್ಲಿ ಮುಜರಾಯಿಯಿಂದ ಅಯೋಧ್ಯೆ […]

ಬಿಟ್ ಕಾಯಿನ್ ಅಕ್ರಮ ಪ್ರಕರಣಇಬ್ಬರ ಬಂಧನ

ಬೆಂಗಳೂರು:ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬAಧಿಸಿದAತೆ ಮೊದಲ ಅರೆಸ್ಟ್ ಮಾಡಲಾಗಿದ್ದು, ಎಸ್‌ಐಟಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಸಾಕ್ಷ್ಯ ನಾಶ ಮಾಡಿದ ಹಿನ್ನೆಲೆ ಈ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಎಸ್‌ಐಟಿ ಅಧಿಕಾರಿಗಳು ಐವರನ್ನು ವಶಕ್ಕೆ ಪಡೆದಿದ್ದರು. ಬಂಧಿತರಲ್ಲಿ ಪ್ರಶಾಂತ್ ಬಾಬು ಸೈಬರ್ ಇನ್ಸ್ಪೆಕ್ಟರ್ ಆಗಿದ್ದು, ಸಂತೋಷ್ ಸೈಬರ್ ಸೆಂಟರ್ ವ್ಯಕ್ತಿ ಆಗಿದ್ದ.ಪ್ರಕರಣಕ್ಕೆ ಸಂಬAಧಿಸಿದAತೆ ಸಿಸಿಬಿ ಪೊಲೀಸರು ಶ್ರೀಕಿಯನ್ನು 90 ದಿನ ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಂಡಿದ್ದರು. ಸಿಸಿಬಿ ಬಂಧನದಲ್ಲಿದ್ದಾಗ […]