ನಿಗಮ-ಮಂಡಳಿ ನಿರೀಕ್ಷೆಯಲ್ಲಿದ್ದ ಕಾರ್ಯಕರ್ತರಿಗೆ ಈಗ ಡವಡವ
ಬೆಂಗಳೂರು:ತೀವ್ರ ಒತ್ತಡದ ಹಿನ್ನೆಲೆಯಲ್ಲಿ ೩೪ ಮಂದಿ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವ ರಾಜ್ಯ ಸರ್ಕಾರವು ಕಾರ್ಯಕರ್ತರಿಗೆ ನಿಗಮ-ಮಂಡಳಿ ಹುದ್ದೆ ಹಂಚುವ ಪ್ರಕ್ರಿಯೆಗೆ ವೇಗ ನೀಡುತ್ತಿಲ್ಲ. ಕಳೆದ 8-10 ದಿನಗಳಿಂದ ನೇಮಕ ಪ್ರಕ್ರಿಯೆ ಬಗ್ಗೆ ಸುಳಿವೇ ಇಲ್ಲದಿರುವುದರಿಂದ ಆಕಾಂಕ್ಷಿ ಕಾರ್ಯಕರ್ತರಲ್ಲಿ ತೀವ್ರ ಆತಂಕ ಮನೆ ಮಾಡಿದೆ.ಶಾಸಕರಿಗೆ ಜ.26 ರಂದೇ ನಿಗಮ-ಮಂಡಳಿ ಹಂಚಿಕೆಯಾಗಿದೆ. ಕಾರ್ಯಕರ್ತರ ಪೈಕಿ 34 ಮಂದಿ ಕಾರ್ಯಕರ್ತರ ಪಟ್ಟಿ ಸಿದ್ಧವಾಗಿದ್ದರೂ ನಿಗಮ-ಮಂಡಳಿ ಹಂಚಿಕೆಯಾಗಿಲ್ಲ. ಈ ಬಗ್ಗೆ ಒಂದೆರಡು ಸಭೆ ನಡೆಯಿತಾದರೂ ಕಳೆದ 8-10 ದಿನಗಳಿಂದ ಈ […]







































































































































































































































































































































































































































































































































































































































































































































































































































































































































































































































































































































