ನಾನು ಕೇಸರಿ ಶಾಲು ಹಾಕುವುದಿಲ್ಲ, ಕುಮಾರಸ್ವಾಮಿ ಹಾಕಿದ್ದನ್ನು ಪರೋಕ್ಷವಾಗಿ ಖಂಡಿಸಿದ ದೇವೇಗೌಡ
ನವದೆಹಲಿ/ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡ ಗ್ರಾಮದ ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದಕ್ಕೆ ಸ್ವತಃ ಹೆಚ್ಡಿ ದೇವೇಗೌಡ ಖಂಡಿಸಿದ್ದಾರೆ.ಈ ಬಗ್ಗೆ ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ದೇವೇಗೌಡ, ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು, ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದು ಹೇಳಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವುದನ್ನು ಪರೋಕ್ಷವಾಗಿ ಖಂಡಿಸಿದ್ದಾರೆ. ನಾಳೆ ನರೇಂದ್ರ ಮೋದಿ ಜೊತೆಗೆ ಹೋದಾಗಲೂ ನನ್ನ ಪಕ್ಷದ ಶಾಲು […]







































































































































































































































































































































































































































































































































































































































































































































































































































































































































































































































































































































