September 14, 2026

ಟಿಕೆಟ್ ಘೋಷಣೆಗೂ ಮುನ್ನವೇ ಟವೆಲ್ ಹಾಕಿದ ಈಶ್ವರಪ್ಪ

ಶಿವಮೊಗ್ಗ:ಲೋಕಸಭಾ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಈಗಾಗಲೇ ರಾಜಕಾರಣಿಗಳು ತಯಾರಿಯನ್ನು ಮಾಡಿಕೊಳ್ಳುತ್ತಿದ್ದು, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕೂಡ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ.ಬಿಜೆಪಿಯ ಲೋಕಸಭಾ ಟಿಕೆಟ್ ಘೋಷಣೆಗೂ ಮುನ್ನವೇ ತಮ್ಮ ಪುತ್ರನ ಪರ ಟವೆಲ್ ಹಾಕಿರುವ ಮಾಜಿ ಶಾಸಕ ಕೆಎಸ್ ಈಶ್ವರಪ್ಪ, ಹಾವೇರಿಯಲ್ಲಿ ಕಾಂತೇಶ್ ಲೋಕಸಭಾ ಚುನಾವಣೆಗೆ ತಯಾರಿ ಮಾಡಿಕೊಂಡಿದ್ದು, ಈಗಾಗಲೇ ಕಾಂತೇಶ್ ಓಡಾಟ ಆರಂಭಿಸಿದ್ದಾರೆ ಎಂದು ಹೇಳಿದರು. ಈ ಸಂಬAಧ ಸುದ್ದಿಗಾರರ ಜೊತೆ ಶಿವಮೊಗ್ಗದಲ್ಲಿ ಮಾತನಾಡಿರುವ ಕೆಎಸ್ ಈಶ್ವರಪ್ಪ, ಹಾವೇರಿಯಲ್ಲಿ […]

ಭಾರತವನ್ನು ಒಡೆಯುವ ಮಾತು ಯಾರೂ ಆಡಬಾರದು

ಬೆಂಗಳೂರು :ನಮ್ಮ ಭಾರತ ಭವ್ಯ ಭಾರತ. ಯಾರು ಒಡೆಯುವ ಮಾತು ಅಡಬಾರದು ಅಂತ ಸಂಸದ ಡಿಕೆ ಸುರೇಶ್ ಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ಕೊಟ್ಟಿದ್ದಾರೆ.ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರ ಆಗಬೇಕು ಎಂಬ ಸಂಸದ ಡಿಕೆ ಸುರೇಶ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆ ಸುರೇಶ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ದೇಶ ಒಗ್ಗೂಡಿಸಲು ಸಾವಿರಾರು ಜನ ಜೀವ ಕಳೆದುಕೊಂಡಿದ್ದಾರೆ. ನೂರಾರು ವರ್ಷ ಹೋರಾಟಗಳು ನಡೆದಿವೆ. ಗಾಂಧೀಜಿಯಿAದ ಹಿಡಿದು ಅನೇಕ ಸ್ವಾತಂತ್ರ‍್ಯ ಹೋರಾಟಗಾರರು ದೇಶಕ್ಕೆ […]

ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಬೆಂಗಳೂರು:ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಲ್ಲೇಶ್ವರಂನ ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ.ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕುಸುಮಿತ (22) ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ಕೂಡಲೇ ಆಕೆಯನ್ನು ಸ್ಥಳೀಯ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.ಘಟನೆಯಲ್ಲಿ ಯಾರ ನಿರ್ಲಕ್ಷ್ಯ ನಡೆದಿದೆ ಎಂಬ ಬಗ್ಗೆ ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ. ಇನ್ನೂ ಘಟನೆಗೆ ವೇಗವಾಗಿ ಬಸ್ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಮಲ್ಲೇಶ್ವರಂ ಟ್ರಾಫಿಕ್ […]

6 ವರ್ಷ ಪ್ರೀತಿ, ಮದುವೆ, ಮಗು ಕೊಟ್ಟು ಕೈಬಿಟ್ಟಮತ್ತೊಂದು ಮದುವೆಯಾದ ಭೂಪ

ಯಾದಗಿರಿ:6 ವರ್ಷ ಪ್ರೀತಿಸಿ, ಮದುವೆಯಾಗಿ ಮಗುವಾದ ಮೇಲೂ ಮತ್ತೊಂದು ಹುಡುಗಿಯ ಬೆನ್ನು ಬಿದ್ದು ಆಕೆಯನ್ನೂ ಕೈಹಿಡಿದ ಘಟನೆಯೊಂದು ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.ಯಾದಗಿರಿಯ ದಲಿತ ಸಂಘಟನೆಯ ಮುಖಂಡನನ್ನು ಪ್ರೀತಿಸಿ ಮದುವೆ ಆಗಿ ತಪ್ಪು ಮಾಡಿದ್ದೇನೆ. ಇದಕ್ಕೆ ನ್ಯಾಯ ಕೊಡಿಸಿ ಅಂತಾ ಪತ್ನಿ ಇದೀಗ ಕಣ್ಣೀರು ಹಾಕುತ್ತಿದ್ದಾರೆ.ಘಟನೆ ವಿವರ:ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಿವಾಸಿ ಶರಣು ಎಂಬಾತ ಕಾಲೇಜು ಜೀವನದಲ್ಲಿ ಕ್ಯಾಂಪ ಗೆ ಅಂತ ಬೆಂಗಳೂರಿಗೆ ತೆರಳಿದ್ದ. ಇದೇ ಕ್ಯಾಂಪ್‌ಗೆ ಬಂದಿದ್ದ ಕನಕಪುರ ಸುಂದರಿಯೊಬ್ಬಳು ಶರಣುವಿನ ಕಣ್ಣು ಕುಕ್ಕಿದ್ದಳು. […]

20 ಕ್ಷೇತ್ರ ಗೆಲ್ಲುವ ಗುರಿ ಇದೆ

ಬೆಂಗಳೂರು:ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಚುರುಕಾಗಿದೆ. ಚುನಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಚಿವರು ಜೊತೆ ಡಿನ್ನರ್ ಮೀಟಿಂಗ್ ನಡೆದಿದೆ. ಈ ಬಗ್ಗೆ ಸಚಿವ ಚಲುವರಾಯಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಚುನಾವಣೆ ವಿಚಾರವಾಗಿ ಪಕ್ಷದ ತಂತ್ರಗಳ ಬಗ್ಗೆ ಮಾತನಾಡಲು ಕರೆದಿದ್ದರು ಎಂದಿದ್ದಾರೆ.ಪಕ್ಷ ಏನು ಹೇಳುತ್ತೊ ಅದನ್ನು ಉಸ್ತುವಾರಿ ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕು. 28 ಕ್ಷೇತ್ರಗಳನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ತೀವಿ. ಬಿಜೆಪಿ ರೀತಿ ನಾವು 28ಕ್ಕೆ 28 ಗೆಲ್ಲುತ್ತೀವಿ ಎಂದು ಹೇಳುವುದಿಲ್ಲ. 20 ಕ್ಷೇತ್ರಗಳಲ್ಲಿ ನಾವು ಗೆಲ್ಲಬೇಕೆಂಬ ಗುರಿ […]

ಸಚಿವರಿಗೆ ಊಟದ ಜೊತೆ ಸಿಎಂ ಸಿದ್ದರಾಮಯ್ಯ ಪಾಠಬಿಜೆಪಿಯನ್ನು ಕಟ್ಟಿಹಾಕಲು ಪ್ಲಾನ್

ಬೆಂಗಳೂರು:ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಆದ ನಂತರ ಫುಲ್ ಜೋಶ್‌ನಲ್ಲಿರುವ ಬಿಜೆಪಿಯು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದಲ್ಲಿ ಗೆದ್ದೇ ಗೆಲ್ಲುವೆವು ಎಂಬ ವಿಶ್ವಾಸದಲ್ಲಿದೆ.ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ರಾಮನ ವಿಗ್ರಹ ಪ್ರತಿಷ್ಠಾಪನೆ ನಂತರ ಫುಲ್ ಆಕ್ಟೀವ್ ಮೋಡ್‌ನಲ್ಲಿ ಬಿಜೆಪಿ ಇದ್ದು, ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಕೂಡ ಬಿಜೆಪಿಗೆ ಠಕ್ಕರ್ ನೀಡಲು ಪ್ಲಾನ್ ರೂಪಿಸುತ್ತಿದೆ. ಇದರ ಮೊದಲ ಹಂತವಾಗಿ ನಿನ್ನೆ ರಾತ್ರಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಸಚಿವ ಸಂಪುಟದ ಸದಸ್ಯರಿಗೆ ಔತಣ ಕೂಟ ಏರ್ಪಡಿಸಲಾಗಿದ್ದು, […]

25 ಲಕ್ಷ ಜನರಿಂದ ಬಾಲಕ ರಾಮನ ದರ್ಶನ 11 ಕೋಟಿ ರೂ. ಕಾಣಿಕೆ ಸಂಗ್ರಹ

ಅಯೋಧ್ಯೆ:ಇಲ್ಲಿನ ರಾಮಮಂದಿರದಲ್ಲಿ ಬಾಲಕ ರಾಮನ ಪ್ರಾಣ ಪ್ರತಿಷ್ಠೆಯಾದ ಬಳಿಕ ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದರಿಂದ ಸುಮಾರು 11 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ದೇವಾಲಯದ ಟ್ರಸ್ಟ್ನ ಕಚೇರಿ ಪ್ರಭಾರಿ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.ಕಳೆದ 11 ದಿನಗಳಲ್ಲಿ ಸುಮಾರು 8 ಕೋಟಿ ರೂ.ಗಳನ್ನು ಕಾಣಿಕೆ ಪೆಟ್ಟಿಗೆಗಳಲ್ಲಿ ಭಕ್ತರು ಹಾಕಿದ್ದಾರೆ. ಚೆಕ್ ಮತ್ತು ಆನ್‌ಲೈನ್ ಮೂಲಕ ಪಡೆದ ಮೊತ್ತ ಸುಮಾರು 3.50 ಕೋಟಿ ರೂ. ಆಗಿದೆ. ದೇಗುಲದ ಗರ್ಭಗುಡಿಯಲ್ಲಿ […]

ಚಿಕ್ಕಪ್ಪನಿಂದಲೇ ಬಾಲಕಿಯ ಶಿರಚ್ಛೇದಪಶ್ಚಿಮ ಬಂಗಾಳದಲ್ಲಿ ಪರಿಸ್ಥಿತಿ ಉದ್ವಿಗ್ನ

ಕೋಲ್ಕತ್ತಾ:ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಸಂಬAಧಿಯೊಬ್ಬ 11 ವರ್ಷದ ಬಾಲಕಿಯ ಶಿರಚ್ಛೇದ ಮಾಡಿರುವ ಘಟನೆ ನಡೆದಿದ್ದು, ಪಶ್ಚಿಮದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಘಟನೆ ಖಂಡಿಸಿ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ.ಈ ಹಿಂದೆ ಹಲವು ಬಾರಿ ಬಾಲಕಿ ತಂದೆ ಸಾರ್ವಜನಿಕವಾಗಿ ಅವಮಾನಿಸಿ ಥಳಿಸಿದ್ದರಿಂದ ನಾನು ಆಕೆಯನ್ನು ಕೊಂದಿರುವುದಾಗಿ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದಾನೆ. ಆರೋಪಿ ಬಾಲಕಿಯ ಶಿರಚ್ಛೇದ ಮಾಡುವ ಮೊದಲು ಆಕೆಯ ಮೇಲೆ ಅತ್ಯಾಚಾರವೆಸಗಿದ್ದನೆ ಎಂಬ ಬಗ್ಗೆ ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ.ಜನವರಿ 29 ರಿಂದ ನಾಪತ್ತೆಯಾಗಿದ್ದ ಬಾಲಕಿಯ ಮುಂಡ ಮತ್ತು ತಲೆ […]