September 16, 2026

ಜೀವನದಲ್ಲಿ ಮೊದಲ ಬಾರಿಗೆ ಭಾವುಕನಾಗಿದ್ದೇನೆ – 11 ದಿನಗಳ ವ್ರತ ಆರಂಭಿಸಿದ ಮೋದಿ

ನವದೆಹಲಿ: ಜನವರಿ 22ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನಾ   ಕಾರ್ಯಕ್ರದಲ್ಲಿ ಭಾಗಿಯಾಗಲಿರುವ ಮೋದಿ ಇಂದಿನಿಂದ 11 ದಿನಗಳ ವ್ರತ ಆರಂಭಿಸಿದ್ದಾರೆ. ಆಡಿಯೋ ಮೂಲಕ ದೇಶದ ಜನರಿಗೆ ಸಂದೇಶ ನೀಡಿದ ಮೋದಿ ಮೊದಲ ಬಾರಿಗೆ ನನ್ನ ಜೀವನದಲ್ಲಿ ಭಾವುಕನಾಗಿದ್ದೇನೆ ಎಂದು ಹೇಳಿದ್ದಾರೆ.  ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆದ ರಾಮಮಂದಿರದ ಸಮಾರಂಭದಲ್ಲಿ, ಈ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಪ್ರಧಾನಿ ಮೋದಿ ಹೇಳಿದರು. ನಾನು 11 ದಿನ ವಿಶೇಷ ವ್ರತ ಆರಂಭಿಸುತ್ತೇನೆ. ಪ್ರಭು ಶ್ರೀರಾಮನು ಕಾಲ ಕಳೆದ ಪಂಚವಟಿಯ […]

ಕೇಂದ್ರ ಸೇವೆಗೆ ತೆರಳಲು ರಾಜ್ಯದ ಐಪಿಎಸ್ ಅಧಿಕಾರಿಗಳ ನಕಾರ

ಬೆಂಗಳೂರು:ಕರ್ನಾಟಕದಲ್ಲಿರುವ ಎಸ್‌ಪಿ ದರ್ಜೆಯ ಅಧಿಕಾರಿಗಳನ್ನು ಕೇಂದ್ರ ಗೃಹ ಇಲಾಖೆ ಕೇಂದ್ರದ ಸೇವೆಗೆ ಬಲವಂತವಾಗಿ ಶಿಫಾರಸ್ಸು ಮಾಡಿರುವ ಆರೋಪ ಕೇಳಿಬಂದಿದೆ. ತಮ್ಮ ಅಭಿಪ್ರಾಯಗಳನ್ನು ಕೇಳದೆ ಶಿಫಾರಸ್ಸು ಮಾಡಲಾಗಿದೆ ಎಂದು ಕೆಲವು ಐಪಿಎಸ್ ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದು, ಕೇಂದ್ರಕ್ಕೆ ಲಿಖಿತವಾಗಿ ಅಭಿಪ್ರಾಯ ತಿಳಿಸಲು ಚಿಂತನೆ ನಡೆಸಿದ್ದಾರೆ.ಒತ್ತಾಯ ಪೂರ್ವಕವಾಗಿ ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಿರುವ ಹಿನ್ನೆಲೆ ಕೆಲವು ಐಪಿಎಸ್ ಅಧಿಕಾರಿಗಳು ಅಸಮಾಧಾನಗೊಂಡಿದ್ದಾರೆ. ಕೇಂದ್ರ ಗೃಹ ಇಲಾಖೆಯು ಒಟ್ಟು 28 ಎಸ್‌ಪಿ ದರ್ಜೆಯ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಿದೆ. ಈ ಪೈಕಿ […]

ಕರವೇ ನಾರಾಯಣಗೌಡಗೆ ತಪ್ಪಿಲ್ಲ ಸಂಕಷ್ಟ

ಬೆಂಗಳೂರು:ಕರ್ನಾಟಕ ರಕ್ಷಣಾ ವೇದಿಕೆ ಕಳೆದ ವರ್ಷ ಡಿಸೆಂಬರ್ 27 ರಂದು ರಾಜಧಾನಿ ಬೆಂಗಳೂರಿನಲ್ಲಿ ನಾಮಫಲಕ ಮಹಾ ಅಭಿಯಾನ ಕೈಗೊಂಡಿತ್ತು. ಅಂಗಡಿ-ಮುಗ್ಗಟ್ಟು, ಮಾಲ್‌ಗಳು ಸೇರಿದಂತೆ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಇಲ್ಲದಿದ್ದಕ್ಕೆ ಹೋರಾಟ ನಡೆಸಿದ್ದರು. ಅಂದು ಕನ್ನಡ ನಾಮಫಲಕವಿಲ್ಲದ ಕೆಲವು ಮಾಲ್ ಮತ್ತು ಅಂಗಡಿಗಳ ಮೇಲೆ ಕರವೇ ಕಾರ್ಯಕರ್ತರು ಕಲ್ಲು ತೂರಿದ್ದಾರೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ೨೯ ಜನರನ್ನು ಬಂಧಿಸಲಾಗಿತ್ತು.ಈ ಪ್ರಕರಣದಲ್ಲಿ […]

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಬಸ್ ಕ್ಲೀನರ್ ಅರೆಸ್ಟ್

ನೆಲಮಂಗಲ:ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರ ಎಸಗಿದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ದೊಡ್ಡಬಳ್ಳಾಪುರದ ಆನಂದ್ (24) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ವಾರದ ಹಿಂದೆ ಶಾಲೆಗೆ ಹೋಗಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಪೋಷಕರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಸಿದ್ದರು. ಮೊಬೈಲ್ ಕರೆ ಆಧಾರದ ಮೇಲೆ ಯಲಹಂಕ ಬಳಿ ಬಾಡಿಗೆ ಮನೆಯಲ್ಲಿರಿಸಿದ್ದ 14 ವರ್ಷದ ಬಾಲಕಿಯನ್ನು ಪೊಲೀಸರು […]

ನಿಷೇಧಾಜ್ಞೆ ಉಲ್ಲಂಘಿಸಿ: 17 ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್

ಮಂಡ್ಯನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್ ರ‍್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬAಧಿಸಿ ಮಂಡ್ಯ ಬಿಜೆಪಿಯ 17 ಮಂದಿ ಕಾರ್ಯಕರ್ತರಿಗೆ ಪಾಂಡವಪುರ ಜೆಎಂಎಫ್‌ಸಿ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಈ ಕಾರ್ಯಕರ್ತರು ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ವಿರುದ್ಧದ ಪ್ರತಿಭಟನೆಗೆ ಮಂಗಳೂರಿಗೆ ಹೊರಟಿದ್ದರು. ಪಾಂಡವಪುರದಿAದ ಮಂಗಳೂರಿಗೆ ಬೈಕ್ ರ‍್ಯಾಲಿ ಮೂಲಕ ಹೊರಟಿದ್ದರು. ಇದೇ ವೇಳೆ ಪಾಂಡವಪುರದಲ್ಲಿ ಪ್ರತಿಭಟನಾಕಾರರನ್ನು ತಡೆದಿದ್ದ ಪೊಲೀಸರು, ಎಫ್‌ಐಆರ್ ದಾಖಲಿಸಿ ನಂತರ ಚಾರ್ಜ್ಶೀಟ್ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆಗೆ ಕೋರ್ಟ್ಗೆ ಹಾಜರಾಗದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಡಿಸೆಂಬರ್ ತಿಂಗಳಲ್ಲೇ […]

ಆಸ್ಪತ್ರೆ ವೈದ್ಯರ ಯಡವಟ್ಟುಕೋಮಾಕ್ಕೆ ಜಾರಿದ್ದ ಯುವಕ ಸಾವು

ಬೆಂಗಳೂರು:ಆಸ್ಪತ್ರೆ ವೈದ್ಯರ ಯಡವಟ್ಟಿನಿಂದಾಗಿ ಆರು ವರ್ಷಗಳ ಕಾಲ ಕೋಮಾಕ್ಕೆ ಜಾರಿದ್ದ ಯುವಕ ಇದೀಗ ಮೃತಪಟ್ಟ ವಿಚಾರ ಬೆಳಕಿಗೆ ಬಂದಿದೆ. ಏಪ್ರಿಲ್ 4, 2017 ರಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ವಿಘ್ನೇಶ್ (20), 2024ರ ಜನವರಿ 3 ರಂದು ಮೃತಪಟ್ಟಿದ್ದಾನೆ. ಚಿಕಿತ್ಸಾ ವೆಚ್ಚ ನೀಡುವುದಾಗಿ ಹೇಳಿ ಕೇವಲ ಐದು ಲಕ್ಷ ರೂಪಾಯಿ ನೀಡಿ ಕೈತೊಳೆದುಕೊಂಡ ವೈದ್ಯರ ವಿರುದ್ಧ ಮೃತ ಯುವಕನ ಪೋಷಕರು ಬೆಂಗಳೂರು ನಗರದ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಹರ್ನಿಯಾ ಚಿಕಿತ್ಸೆಗೆಂದು 2017ರ ಏಪ್ರಿಲ್ 4 ರಂದು […]

ಹೊಸಪೇಟೆಯ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಾಲ್ವರು ಮಹಿಳೆಯರ ರಕ್ಷಣೆ

ಬಳ್ಳಾರಿ:ವೇಶ್ಯಾವಾಟಿಕೆ ನಡೆಸುತ್ತಿದ್ದ ಹೊಸಪೇಟೆಯ ಲಾಡ್ಜ್ ಮೇಲೆ ದಾಳಿ ನಡೆದಿದ್ದು, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ವಿಜಯನಗರದ ಹೊಸಪೇಟೆಯ ರಾಣಿಪೇಟ್‌ನಲ್ಲಿ ಒಡನಾಡಿ ಸಂಸ್ಥೆ ಮತ್ತು ಹೊಸಪೇಟೆ ಪಟ್ಟಣ ಪೊಲೀಸರಿಂದ ಜಂಟಿ ದಾಳಿ ನಡೆದಿದೆ.ಲಾಡ್ಜ್ ನ ನೆಲಮಹಡಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಇದನ್ನು ಅರಿತಿದ್ದ ಪೊಲೀಸರ ತಂಡ ಲಾಡ್ಜ್ ಮೇಲೆ ದಾಳಿ ಮಾಡಿದೆ. ಈ ವೇಳೆ ಲಾಡ್ಜ್ನಲ್ಲಿದ್ದ 6ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಯಿತು. ಬಳಿಕ ದಂಧೆಯಲ್ಲಿ ತೊಡಗಿದ ಸಂತ್ರಸ್ತ ಮಹಿಳೆಯರ ರಕ್ಷಣೆ ಮಾಡಲಾಗಿದೆ.ಕೂಡ್ಲಿಗಿ ಮೂಲದ ಓರ್ವ ಮಹಿಳೆ, ಕೋಲ್ಕತ್ತಾದ ಇಬ್ಬರು […]

ನಾವು ಗಾಂಧಿ ಹಿಂದುತ್ವವಾದಿಗಳು

ನವದೆಹಲಿ:ರಾಮಮಂದಿರ ಉದ್ಘಾಟನೆ ಬಿಜೆಪಿ ಚುನಾವಣೆಗೆ ಬಳಸಿಕೊಳ್ಳುತ್ತಿದೆ. ರಾಮಮಂದಿರ ಕಾರ್ಯಕ್ರಮವನ್ನು ಕಾಂಗ್ರೆಸ್ ತಿರಸ್ಕರಿಸಿಲ್ಲ. ಬದಲಿಗೆ ಯಾವ ಕಾರಣಕ್ಕೆ ನಾವು ಹೋಗಲ್ಲ ಅನ್ನೋದು ವಿವರಿಸಿದ್ದೇವೆ. ಪೂರ್ಣಗೊಳ್ಳದ ಮಂದಿರವನ್ನು ರಾಜಕೀಯಕ್ಕೆ ಬಳಸುತ್ತಿರುವುದರಿಂದ ನಾವು ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.ನವದೆಹಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಹಿಂದೂ ವಿರೋಧಿ ಅಂತಾ ಕರೆಯಬಹುದು. ಆದರೆ ನಾವು ಹಿಂದೂಗಳೇ. ರಾಮಲಲ್ಲಾ ಟೆಂಟ್‌ನಲ್ಲಿ ಇದ್ದಾಗ ನಾವು ಹೋಗಿ ದರ್ಶನ ಮಾಡಿದ್ದೇವೆ. ಆದರೆ ಬಿಜೆಪಿಯವರು ಹೇಳುವ ರೀತಿಯಲ್ಲಿ ನಮ್ಮದು ಗೋಡ್ಸೆ ಹಿಂದುತ್ವ ಅಲ್ಲ, ನಮ್ಮದು ಗಾಂಧಿ […]

ಹೆಚ್‌ಡಿಕೆ ಸ್ಪರ್ಧೆ –ಚರ್ಚೆ ಮಾಡಿ ನಿರ್ಧಾರ

ಬೆಂಗಳೂರು :ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಂಡ್ಯದಿAದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರವಾಗಿ ಕಾರ್ಯಕರ್ತರು, ನಾಯಕರ ಬಳಿ ಚರ್ಚೆ ಮಾಡಿ ತೀರ್ಮಾನ ಮಾಡುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.ಮಂಡ್ಯದಿAದ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಅವರು ರಾಜ್ಯಮಟ್ಟದ ನಾಯಕರು. ಕುಮಾರಸ್ವಾಮಿ ಅವರನ್ನು ಜನ ಪ್ರೀತಿ ಕೊಟ್ಟು ಬೆಳೆಸಿದ್ದಾರೆ. ಹಲವಾರು ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ನಿಲ್ಲಬೇಕು ಎಂಬ ಬೇಡಿಕೆ ಇದೆ.ಅದರಲ್ಲಿ ಮಂಡ್ಯ ಜಿಲ್ಲೆ ಕೂಡಾ ಒಂದು. ಸ್ಪರ್ಧೆ ಮಾಡುವ ವಿಚಾರವಾಗಿ […]

ಬಿಜೆಪಿ ಅಭಿಪ್ರಾಯ ಸಂಗ್ರಹಣೆ ಸಭೆ:ಮುಖಂಡರಿAದ ಭಿನ್ನ ಅಭಿಪ್ರಾಯಗಳು

ಬೆಂಗಳೂರು:ಲೋಕಸಭೆ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ ನಾಯಕರು ಬೆಂಗಳೂರು ನಗರದ ಯಲಹಂಕದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಆದರೆ, ಸಭೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಅರುಣ್ ಕುಮಾರ್ ಪುತ್ತಿಲ ಬಂಡಾಯದ ಸ್ಪರ್ಧೆಯಿಂದ ಬಿಜೆಪಿ ಹೊಡೆತ ತಿಂದ ಬಗ್ಗೆ ಹೆಚ್ಚು ಚರ್ಚೆಯಾಗಿದೆ. ಇಂತಹ ತಪ್ಪು ನಿರ್ಧಾರ ಕೈಗೊಳ್ಳದಂತೆ ಮುಖಂಡರು ಎಚ್ಚರಿಕೆಯ ಸಲಹೆಯನ್ನು ನೀಡಿದ್ದಾರೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭಿಪ್ರಾಯ ಸಂಗ್ರಹದ ವೇಳೆ ವಿಧಾನಸಭಾ ಚುನಾವಣೆಯಲ್ಲಿನ ಪುತ್ತೂರು […]