September 16, 2026

ಹಾವೇರಿಯಲ್ಲಿ ನೈತಿಕ ಪೊಲೀಸ್ ಗಿರಿ

ಹಾವೇರಿ:ಹಾವೇರಿ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಬೆಳಕಿಗೆ ಬಂದಿದೆ. ಅನ್ಯಕೋಮಿನ ಪುರುಷನೊಂದಿಗೆ ಸಿಕ್ಕಿ ಬಿದ್ದ ಮಹಿಳೆಯನ್ನು ಥಳಿಸಿ, ಖಾಸಗಿ ಅಂಗಾಗವನ್ನು ಗಾಸಿ ಗೊಳಿಸಿ ಗ್ಯಾಂಗ್ ರೇಫ್ ಮಾಡಲು ವಿಫಲ ಯತ್ನ ನಡೆಸಿದ ಘಟನೆ ಎರಡು ದಿನದ ನಂತರ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬAಧ ಇಬ್ಬರನ್ನು ಬಂಧಿಸಲಾಗಿದ್ದು ಉಳಿದ ಆರೋಪಿಗಳಿಗೆ ಬಲೆ ಬೀಸಲಾಗಿದೆ. ಮತ್ತೊಂದೆಡೆ ನೈತಿಕ ಪೊಲೀಸ್ ಗಿರಿ ಪ್ರಕರಣದ ಆರೋಪಿಗಳ ಮತ್ತೊಂದು ವಿಡಿಯೋ ವೈರಲ್ ಆಗಿದೆ.ಹಾವೇರಿಯಲ್ಲಿ ನೈತಕ ಪೊಲೀಸ್ ಗಿರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. […]

ಲಾಭದ ಹಾದಿಗೆ ಮರಳಿದ ನಮ್ಮ ಮೆಟ್ರೋ 9 ತಿಂಗಳಲ್ಲಿ ಬರೋಬ್ಬರಿ 450 ಕೋಟಿ ರೂ. ಆದಾಯ

ಬೆಂಗಳೂರು:ನಷ್ಟದಲ್ಲಿ ಸಾಗುತ್ತಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ನಡುವೆ ನಮ್ಮ ಮೆಟ್ರೋ ಲಾಭದ ಹಳಿಗೆ ಮರಳಿದೆ. ಮೊದಲ ಬಾರಿಗೆ ನಷ್ಟದ ಹಾದಿಯಿಂದ ಲಾಭದ ಹಾದಿಗೆ ಬಂದಿರುವ ನಮ್ಮ ಮೆಟ್ರೋ, ಕಳೆದ 9 ತಿಂಗಳಿನಲ್ಲಿ ಬಿಎಂಆರ್‌ಸಿಎಲ್‌ಗೆ ಬರೊಬ್ಬರಿ 450 ಕೋಟಿ ರೂ. ಆದಾಯ ಗಳಿಸಿಕೊಟ್ಟಿದೆ. ಮೆಟ್ರೋ ಜಾಲ ವಿಸ್ತರಣೆ, ನಿಲ್ದಾಣ ಹಾಗೂ ರೈಲಿನ ಒಳಗೆ ಜಾಹೀರಾತಿಗೆ ಅವಕಾಶ ನೀಡಿರುವುದು ಆದಾಯ ಏರಿಕೆಗೆ ನೆರವಾಗಿದೆ ಎನ್ನಲಾಗಿದೆ.ನಮ್ಮ ಮೆಟ್ರೋ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಜಾಹೀರಾತಿನ ಮೂಲಕ ಬರೊಬ್ಬರಿ 50 ಕೋಟಿ ರೂ. ಆದಾಯ ಗಳಿಸಿದೆ. […]

ಗ್ರಾ.ಪಂ ಮಾಜಿ ಅಧ್ಯಕ್ಷನ ಹತ್ಯೆ

ಬೀದರ್:ಜಮೀನಿಗೆ ಹೋಗುವ ದಾರಿಗೆ ಕಲ್ಲು ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾಜಿ ಗ್ರಾಪಂ ಅಧ್ಯಕ್ಷನನ್ನು ಮಚ್ಚಿನಲ್ಲಿ ಹೊಡೆದು ಹತ್ಯೆಗೈದ ಘಟನೆ ಚಿಟ್ಟಗುಪ್ಪದ ನಿರ್ಣಾ ಗ್ರಾಮದಲ್ಲಿ ನಡೆದಿದೆ.ಮಲ್ಲಿಕಾರ್ಜುನ್ ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ. ಈ ವೇಳೆ ಅವರ ಮಗನ ಮೇಲೂ ಹಲ್ಲೆ ನಡೆಸಲಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮದ ಲಿಂಗರಾಜು, ಕಾಶಿನಾಥ್, ಜಗನಾಥ್ ಸೇರಿದಂತೆ ಒಟ್ಟು 8 ರಿಂದ 9 ಜನ ಸೇರಿ ಮಾರಕಾಸ್ತ್ರಗಳಿಂದ ಮಲ್ಲಿಕಾರ್ಜುನ್ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ […]

ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಸಿಎಂ, ಡಿಸಿಎಂ ಮಧ್ಯೆಭಿನ್ನಾಭಿಪ್ರಾಯ ಸ್ಫೋಟ!

ಬೆಂಗಳೂರು:ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು ಬುಧವಾರ ಬೆಂಗಳೂರಿನ ಕ್ವಿನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆದ ಮುಖಂಡರ ಸಭೆಯಲ್ಲಿ ಸಿಎಂ-ಡಿಸಿಎA ಮಧ್ಯೆ ಮುಸುಕಿನ ಗುದ್ದಾಟ ನಡೆದಿದೆ. ನಿಗಮ ಮಂಡಳಿ ವಿಚಾರದಲ್ಲಿ ಇಬ್ಬರ ಭಿನ್ನಾಭಿಪ್ರಾಯ ಸ್ಫೋಟಗೊಂಡಿರುವ ವಿಚಾರ ತಿಳಿದುಬಂದಿದೆ.ಶೀಘ್ರವಾಗಿ ನಿಗಮ ಮಂಡಳಿ ನೇಮಕ ನಡೆಯುತ್ತದೆ. ಶಾಸಕರಿಗೆ ಅವಕಾಶ ಸಿಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕೆ ಡಿಕೆ ಶಿವಕುಮಾರ್ ಶಾಸಕರು ಹಾಗೂ ಕಾರ್ಯಕರ್ತರು ಇಬ್ಬರಿಗೂ ಅವಕಾಶ ಸಿಗಲಿದೆ ಎಂದಿದ್ದಾರೆ. ಆಗ ಸಭೆಯಲ್ಲಿ ಇದ್ದ ಕಾರ್ಯಕರ್ತರು ಹೋ.. […]

ಜೈಲಿಂದ ಹೊರ ಬಂದ ತಕ್ಷಣ ಕ್ಷಮೆ ಕೇಳಿದ ಕರವೇ ನಾರಾಯಣಗೌಡ

ಬೆಂಗಳೂರು:ಕನ್ನಡ ನಾಮಫಲಕ ಹೋರಾಟದಲ್ಲಿ ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಬಿಡುಗಡೆಯಾಗಿ ಮತ್ತೆ ಜೈಲು ಸೇರಿ ಇದೀಗ ಮತ್ತೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ರಿಲೀಸ್ ಆದ ಬಳಿಕ ನಾರಾಯಣ ಗೌಡರು ತಮ್ಮ ಕಾರ್ಯಕರ್ತರ ಬಳಿ ಕ್ಷಮೆ ಕೇಳಿದ್ದಾರೆ.ಬಿಡುಗಡೆಯ ಬಳಿಕ ಫೇಸ್ ಬುಕ್ ಮೂಲಕ ಲೈವ್ ಬಂದ ಕರವೇ ಅಧ್ಯಕ್ಷ, ಆರೋಗ್ಯದ ಸಮಸ್ಯೆಯಿಂದ ಇಂದು ಯಾರ ಜೊತೆಯೂ ಮಾತನಾಡೋಕೆ ಆಗ್ಲಿಲ್ಲ. ಅದಕ್ಕಾಗಿ ಕ್ಷಮೆ ಕೇಳುತ್ತೇನೆ. ನನ್ನ ದೇಹದ ಕೊನೆಯ ಹನಿ ರಕ್ತ ಇರುವವರೆಗೂ […]

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ

ರಾಮನಗರ:65 ವರ್ಷದ ವೃದ್ಧನಿಂದ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವಂತಹ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಕಲೇಟ್ ಕೊಡಿಸುವುದಾಗಿ ಹೇಳಿ ಬಟ್ಟೆ ಬಿಚ್ಚಿಸಿದ ಆರೋಪ ಮಾಡಲಾಗಿದೆ. ಮಾತನಾಡಲು ಬಾರದ ಕಾರಣ ಯಾರಿಗೆ ಹೇಳುತ್ತಾಳೆ ಎಂದು ಬಾಲಕಿಯನ್ನು ಮನೆಯ ಹಿತ್ತಲಿಗೆ ಕರೆದುಕೊಂಡು ಹೋಗಿ ಕೃತ್ಯವೆಸಗಲಾಗಿದೆ.ತಾಯಿ ಮನೆಗೆ ವಾಪಾಸ್ ಆದಾಗ ಬಾಲಕಿ ಅಳುತ್ತಿದ್ದಳು. ಯಾಕೆ ಅಳುತ್ತಿದ್ದೀಯಾ ಅಂತ ಕೇಳಿದಾಗ, ಅಳುತ್ತಲೇ ತನ್ನ ಗುಪ್ತಾಂಗ ತೋರಿಸಿದ್ದಾಳೆ. ಯಾರು ಮಾಡಿದ್ದು ಅಂತ […]

2017ರ ಪ್ರಕರಣದಲ್ಲೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು

ಬೆಂಗಳೂರು:2017ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬAಧ ಬಂಧನಕ್ಕೊಳಗಾಗಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರಿಗೆ ಜಾಮೀನು ಸಿಕ್ಕಿದೆ. ಬೆಂಗಳೂರಿನ 30ನೇ ಎಸಿಎಂಎA ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.ಇತ್ತೀಚೆಗೆ ನಾಮಫಲಕ ಧ್ವಂಸ ಪ್ರಕರಣದಲ್ಲಿ ಜೈಲು ಸೇರಿದ್ದ ನಾರಾಯಣಗೌಡ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ 2017ರ ಹಳೇ ಕೇಸ್ ಮೇಲೆ ಬಂಧಿಸಿದ್ದರು. 2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬAಧ ನಾರಾಯಣಗೌಡ ಅವರನ್ನು ಜನವರಿ 9ರಂದು ಕುಮಾರಸ್ವಾಮಿ […]

ಲೋಕಸಭೆ ಚುನಾವಣೆಗೆ ಗ್ಯಾರಂಟಿಯೇ ಕಾಂಗ್ರೆಸ್ ಅಸ್ತ್ರ:ರಾಜ್ಯ ಮಟ್ಟದ ಸಮಿತಿ ರಚನೆ

ಬೆಂಗಳೂರು:ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಈ ಬಾರಿ ಏನಿಲ್ಲವೆಂದರೂ ೨೮ ಕ್ಷೇತ್ರಗಳಲ್ಲಿ 20 ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಜಾರಿಗೆ ತಂದಿರುವ ಐದು ಗ್ಯಾರಂಟಿಗಳನ್ನು ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆ ಅನುಷ್ಟಾನಕ್ಕೆ ಸಮಿತಿ ರಚನೆ ಮಾಡಲಾಗಿದೆ.ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿ ರಚನೆ ಮಾಡಲಾಗಿದೆ. ಏPಅಅ ಕಚೇರಿಯಲ್ಲಿ ನಡೆದ […]

ಬೆಂಗಳೂರು-ಮೈಸೂರು ಹೆದ್ದಾರಿ ಸುರಕ್ಷತಾ ಕಾಮಗಾರಿಗೆ 688 ಕೋಟಿ ರೂ. ಬಿಡುಗಡೆ

ಮೈಸೂರು:ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಮುಂದಾಗಿದೆ. ಹೆದ್ದಾರಿ ಸುರಕ್ಷತೆಗಾಗಿ ಕೇಂದ್ರ ಸರ್ಕಾರ 688 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಹೆದ್ದಾರಿಯಲ್ಲಿ ಪಾದಾಚಾರಿಗಳಿಗೆ ಮೇಲ್ಸೇತುವೆ, ರಸ್ತೆ ಗುರುತುಗಳು, ಗಾರ್ಡ್ ರೈಲ್, ಕ್ರ‍್ಯಾಶ್ ಬ್ಯಾರಿಯರ್‌ಗಳನ್ನು ಅಳವಡಿಸಲು ಕೇಂದ್ರ ಸರ್ಕಾರ ಬಿಡ್ ಕರೆದಿದೆ. ಈ ಬಗ್ಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟ್ವಿಟ್ ಮಾಡಿ ಮಾಹಿತಿ ಹಂಚಿಕೊAಡಿದ್ದಾರೆ.ಕೇAದ್ರ ಸರ್ಕಾರದ ಇತ್ತೀಚಿನ ಅಂಕಿ-ಅAಶಗಳ ಪ್ರಕಾರ ಜುಲೈ 2023ರ ಅಂತ್ಯದ ವೇಳೆಗೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ೪೦೦ ಅಪಘಾತಗಳು ಸಂಭವಿಸಿದ್ದವು. […]

ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

ಬೆಂಗಳೂರು:ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಕಿಡಿಕಾರಿದ್ದಾರೆ.ಈ ಬಾರಿಯ ಕರ್ನಾಟಕದ ಸ್ತಬ್ಧಚಿತ್ರ […]