September 16, 2026

ಲೋಕಾ ಚುನಾವಣೆಗೆ ಬಿಜೆಪಿ ತಯಾರಿ

ಬೆಂಗಳೂರು:ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಾಲೀಮು ನಡೆಸುತ್ತಿದ್ದು ಬೆಂಗಳೂರಿನ ರೆಸಾರ್ಟ್ನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆದಿದೆ.೮-೯ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡಲಾಗಿದೆ. ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ತುಮಕೂರು, ವಿಜಯಪುರ, ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾವೇರಿ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಪರ್ಯಾಯ ಅಭ್ಯರ್ಥಿ ಹುಡುಕುವ ಬಗ್ಗೆ ಚರ್ಚೆ ಆಗಿದೆ.ಬೆಂಗಳೂರು ಗ್ರಾಮಾಂತರದಲ್ಲಿ ಸ್ಪರ್ಧೆಗೆ ಮಾಜಿ ಸಚಿವ ಸಿಪಿ ಯೋಗೇಶ್ವರ್ ನಿರಾಸಕ್ತಿ ತೋರಿದ್ದು ಬಿಜೆಪಿ ನಾಯಕರನ್ನು ಸಂಕಷ್ಟಕ್ಕೆ ಸಿಲುಕಿದೆ. ಇನ್ನೂ […]

ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಮೇಲೆಲೋಕಾಯುಕ್ತ ದಾಳಿ

ಬೆಂಗಳೂರು:ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಮಾಡಿದ್ದು, ಶೋಧ ಕಾರ್ಯ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಒಟ್ಟು ಏಳು ಕಡೆ ದಾಳಿ ಮಾಡಿದ್ದಾರೆ. ಬಳ್ಳಾರಿಯ ಐದು ಹಾಗೂ ಬೆಂಗಳೂರಿನ ಎರಡು ಕಡೆ ಶೋಧ ನಡೆಸಿದ್ದಾರೆ. ಕುಂದಣ ಪಿಡಿಒ ಪದ್ಮನಾಬ್ ಅವರಿಗೆ ಸೇರಿದ ಮೂರು ಮನೆ ಮೆನಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದರೆ. ಜೊತೆಗೆ ದಾಬಸ್‌ಪೇಟೆ ಹಾಗೂ ತುಮಕೂರಿನಲ್ಲಿ ಸಹ ಪದ್ಮನಾಬ್‌ಗೆ […]

ಬಿಡುಗಡೆಯಾಗುತ್ತಿದ್ದಂತೆ ಕರವೇ ನಾರಾಯಣಗೌಡ ಮತ್ತೆ ಪೊಲೀಸರ ವಶಕ್ಕೆ !

ಬೆಂಗಳೂರು:ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ (ಕರವೇ) ನಾರಾಯಣಗೌಡ ಅವರಿಗೆ ಜಾಮೀನು ಮಂಜೂರು ಆದ ಹಿನ್ನೆಲೆಯಲ್ಲಿ ಇಂದು ಬಿಡುಗಡೆಯಾಗಿದ್ದಾರೆ. ನಾರಯಣಗೌಡ ಅವರು ಬಿಡುಗಡೆಯಾಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಇದೀಗ ಮಾರ್ಥಾಸ್ ಆಸ್ಪತ್ರೆಯಲ್ಲಿ ನಾರಾಯಣಗೌಡ ಅವರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಬಳಿಕ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ. ೨೦೧೭ರ ಹಳೇ ಕೇಸ್ ಸಂಬAಧ ಪೊಲೀಸರು ನಾರಾಯಣಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.ಇನ್ನು ನಾರಾಯಣಗೌಡ ಅವರ ಜೊತೆ ಬಿಡುಗಡೆಯಾದ ೨೮ ಮಂದಿ ಕರವೇ ಕಾರ್ಯಕರ್ತರನ್ನು […]

ಅಭಿಮಾನಿ ಬೈಕ್‌ಗೆ ನಟ ಯಶ್ ಬೆಂಗಾವಲು ವಾಹನ ಡಿಕ್ಕಿಚಿಕಿತ್ಸೆ ಫಲಿಸದೆ ಯುವಕ ಸಾವು

ಗದಗ:ರಾಕಿಂಗ್ ಸ್ಟಾರ್ ಯಶ್ ಅವರ ೩೮ನೇ ಹುಟ್ಟಹಬ್ಬದ ದಿನವೇ ಆಘಾತದ ಮೇಲೆ ಆಘಾತವಾಗಿದೆ. ಬರ್ತ್ಡೇ ಶುಭಾಶಯ ಕೋರಿ ಬ್ಯಾನರ್ ಹಾಕುವಾಗ ಮೂವರು ಅಭಿಮಾನಿಗಳು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದರು. ಮೂವರು ಅಭಿಮಾನಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಇನ್ನು ಆಸ್ಪತ್ರೆಗೆ ಭೇಟಿ ನೀಡಿ ಯಶ್ ವಾಪಸ್ ತೆರಳುತ್ತಿದ್ದಾಗ ಮತ್ತೊಂದು ಅವಘಡ ಸಂಭವಿಸಿತ್ತು. ಯಶ್‌ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಯುವಕ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ […]

ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ

ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಣಿಗೆ ಕೊಟ್ಟಿದ್ದೇನೆ. ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು ಎಂದರು.  ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ. ವಿಶೇಷ ಪೂಜೆ ಸಲ್ಲಿಸುತ್ತೇವೆ. ನಾವು ಹಿಂದುಗಳಲ್ವ? ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ಅದರಲ್ಲೇನು ತಪ್ಪಿದೆ ಎಂದಿದ್ದಾರೆ. […]

ಸ್ವಪಕ್ಷದ ವಿರುದ್ಧ ಆರೋಪಗಳ ಬೆನ್ನಲ್ಲೇ ಅಮಿತ್ ಶಾ, ನಡ್ಡಾ ಭೇಟಿಯಾಗಿ ಬಂದ ಯತ್ನಾಳ್

ವಿಜಯಪುರ: ಈ ಹಿಂದೆ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಕೊರೋನಾ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಭ್ರಷ್ಟಾಚಾರ ಅಗಿದೆ ಎನ್ನುವ ಗಂಭೀರ ಆರೋಪ ಮಾಡಿದ ಬಳಿಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೈಕಮಾಂಡ್​ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ದಾ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ಮಾಡಿದ್ದಾರೆ. ಅಲ್ಲದೇ ಕರ್ನಾಟಕ ರಾಜ್ಯ ರಾಜಕಾರಣದ ಬಗ್ಗೆಯೂ ವಿವರಣೆ ನೀಡಿದ್ದಾರೆ. ಇನ್ನು ಬಗ್ಗೆ ಇಂದು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ […]

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನ ಕರೆದು ಸಿಎಂ ಬುದ್ಧಿ ಮಾತು ಹೇಳಲಿ: ಹೆಚ್‌ಡಿಕೆ

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ (Belagavi) ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಈ ಮಂತ್ರಿಗಳಿಗೆ ನಾಡಿನಲ್ಲಿ ಗ್ಯಾರಂಟಿ ಹೆಸರಲ್ಲಿ ಸರ್ಕಾರ ರಚನೆ ಮಾಡಿ ಯಾವುದೇ ಅಭಿವೃದ್ಧಿ ರಾಜ್ಯದಲ್ಲಿ ಕಾಣುತ್ತಿಲ್ಲ. ಇದನ್ನು ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕುಂಠಿತ ಆಗಿದೆ. ಸರ್ಕಾರ ಬಂದು 8 ತಿಂಗಳು ಆಗಿದೆ. ಬರ ಪರಿಹಾರ ವಿಚಾರದಲ್ಲಿ ಸರ್ಕಾರ […]

ಬಿಜೆಪಿಯವರದ್ದು ಬೋಗಸ್ ಪ್ರೀತಿ, ಇವೆಲ್ಲಾ ನಾಟಕ ಬಂದ್ ಮಾಡಲಿ: ಮಂಕಾಳು ವೈದ್ಯ

ಕಾರವಾರ: ಬಿಜೆಪಿಯವರು ರಾಜಕಾರಣಕ್ಕೋಸ್ಕರ ಏನು ಬೇಕಾದರೂ ಮಾಡುತ್ತಾರೆ. ಬಿಜೆಪಿಯವರದ್ದು ಮೂರು ಅಜೆಂಡಾವಿದೆ. ಸುಳ್ಳು ಹೇಳೋದು, ಗಲಭೆ ಮಾಡೋದು, ದೇವರ ಹೆಸರಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವುದು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರದ್ದು ಬೋಗಸ್ ಭಕ್ತಿ. ರಾಮಮಂದಿರ ಉದ್ಘಾಟನೆ ಆಗದೇ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ಪೂಜೆಯೇ ಆಗದೇ ಮಂತ್ರಾಕ್ಷತೆ ಹೇಗೆ ಕೊಡುತ್ತಾರೆ? ಅಕ್ಷತೆ ಕೊಟ್ಟು, ಮಂತ್ರಾಕ್ಷತೆ ಕೊಟ್ಟು […]

ಸಿಲಿಕಾನ್ ಸಿಟಿಯಲ್ಲಿ ಚುಮುಚುಮು ಮಳೆ – ನಾಳೆಯೂ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಇಂದು (ಸೋಮವಾರ) ನಗರದ ಹಲವೆಡೆ ಮೋಡ ಕವಿದ ವಾತಾವರಣ ಇದ್ದು, ರಾಜಧಾನಿಯ ಹಲವು ಭಾಗಗಳಲ್ಲಿ ಹಗುರ ಮಳೆಯಾಗಿದೆ. ಮಂಗಳವಾರ ಸಹ ಕೆಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳ ಕಾಲ ನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಅಲ್ಲದೇ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆ ಸಾಧ್ಯತೆ ಇದೆ […]

ಬೆಂ-ಮೈ ಹೆದ್ದಾರಿಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳಿಗಾಗಿ 688 ಕೋಟಿ ವ್ಯಯಿಸಲು ಕೇಂದ್ರ ನಿರ್ಧಾರ

ನವದೆಹಲಿ: ಸರಣಿ ಅಪಘಾತಗಳ ಬಳಿಕ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಪ್ರಾಧಿಕಾರ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳಿಗಾಗಿ 688 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲು ನಿರ್ಧರಿಸಿದೆ. ಇತ್ತಿಚೇಗೆ ನಡೆದ ಸಮೀಕ್ಷಾ ವರದಿ ಆಧರಿಸಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರದಿಂದ ಬಿಡ್ ಕೂಡಾ ಕರೆಯಲಾಗಿದೆ. ಸಮೀಕ್ಷೆಯ ಸಮಯದಲ್ಲಿ ಕಂಡುಬಂದಿರುವ ಅಪಾಯಕಾರಿ ತಾಣಗಳು, ಗ್ರೇಡಿಯಂಟ್ ಸಮಸ್ಯೆಗಳನ್ನು ಸರಿಪಡಿಸಲು, ರಸ್ತೆಯಲ್ಲಿ ಹೆಚ್ಚಿನ ಬೆಳಕಿಗಾಗಿ ಲೈಟಿಂಗ್ ವ್ಯವಸ್ಥೆ, ಪಾದಾಚಾರಿಗಳಿಗೆ ಮೇಲ್ಸೇತುವೆಗಳು, ಎಚ್ಚರಿಕೆ ಫಲಕಗಳು, ಹೆಡ್‍ಲೈಟ್ ಪ್ರತಿಫಲಕಗಳು, ರಸ್ತೆ ಗುರುತುಗಳು, ಗಾರ್ಡ್ ರೈಲ್‍ಗಳು ಮತ್ತು […]