September 15, 2026

ಅವಧಿ ಮೀರಿ ಜೆಟ್ ಲ್ಯಾಗ್ ಪಬ್ ಓಪನ್ಪೊಲೀಸರಿಗೆ ನೋಟಿಸ್

ಬೆಂಗಳೂರು:ಅವಧಿ ಮೀರಿ ಪಬ್ ತೆರೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರ ವಿರುದ್ಧ ತನಿಖೆ ನಡೆಸುವಂತೆ ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಅವರು ಮಲ್ಲೇಶ್ವರಂ ಠಾಣೆಯ ಎಸಿಪಿಗೆ ಆದೇಶಿಸಿದ್ದಾರೆ. ಅದರಂತೆ ಮಲ್ಲೇಶ್ವರಂ ಠಾಣೆಯ ಎಸಿಪಿ ಸುಬ್ರಹ್ಮಣ್ಯ ನಗರ ಠಾಣೆಯ ಆರು ಜನ ಪೊಲೀಸರಿಗೆ ನೋಟಿಸ್ ನೀಡಿದ್ದಾರೆ. ಠಾಣಾಧಿಕಾರಿ, ಸಬ್ ಇನ್ಸ್ಪೆಕ್ಟರ್, ನಾಲ್ವರು ಕಾನ್ಸ್ಟೇಬಲ್‌ಗಳಿಗೆ ನೋಟಿಸ್ ನೀಡಲಾಗಿದೆ.ಜನವರಿ 3 ರಂದು ಮಧ್ಯರಾತ್ರಿ ಕಳೆದು ಮರುದಿನ ಬೆಳಗಿನ ಜಾವದವರೆಗೆ ಪಾರ್ಟಿ ಯಾವ ರೀತಿ ನಡೆದಿತ್ತು. ಯಾರೆಲ್ಲಾ […]

ಕೆಆರ್‌ಎಸ್ ಅಣೆಕಟ್ಟೆ ಸುತ್ತಮುತ್ತ ಗಣಿಗಾರಿಕೆ ನಿರ್ಬಂಧ

ಬೆಂಗಳೂರುಕೆಆರ್‌ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೆಆರ್‌ಎಸ್ ಅಣೆಕಟ್ಟೆಯ ೨೦ ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿದೆ. ಕೆಆರ್‌ಎಸ್ ಡ್ಯಾಂ ಬಳಿ ಹಲವು ಬಾರಿ ದೊಡ್ಡ ಶಬ್ದ ಕೇಳಿಬಂದಿದೆ. ಕೃಷ್ಣರಾಜಸಾಗರ ಅಣೆಕಟ್ಟು ಈಗಾಗಲೇ ಸಂಕಷ್ಟದಲ್ಲಿದೆ. ಅಣೆಕಟ್ಟೆಯ ಬಳಿ ಗಣಿಗಾರಿಕೆ ನಡೆಸಿದರೆ ಗಂಭೀರ ಪರಿಣಾಮವಾಗಲಿದೆ. ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಐತಿಹಾಸಿಕ ಮೌಲ್ಯವಿದೆ. ಮೈಸೂರು ಮಹಾರಾಜರು, ಸರ್ […]

ದೇವಸ್ಥಾನದ ಹಾದಿ ಮಾನಸಿಕ ಗುಲಾಮಗಿರಿಯ ಹಾದಿ ರಾಮಮಂದಿರ ಕುರಿತು ಶಿಕ್ಷಣ ಸಚಿವ ವಿವಾದಾತ್ಮಕ ಹೇಳಿಕೆ

ಪಾಟ್ನಾ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರದ ಕುರಿತು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ಹೇಳಿಕೆಯೊಂದನ್ನು ನೀಡಿ ವಿವಾದಕ್ಕೆ ಸಿಲುಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಅಯೋಧ್ಯೆ ರಾಮಮಂದಿರ ಕುರಿತು ಮಾತನಾಡುತ್ತಾ, ದೇವಸ್ಥಾನಕ್ಕೆ ಹೋಗುವ ಹಾದಿ ಮಾನಸಿಕ ಗುಲಾಮಗಿರಿಯ ಹಾದಿಯಾಗಿದೆ. ಶಾಲೆಗಳಿಗೆ ಹೋಗುವ ಹಾದಿ ಮಾತ್ರವೇ ಬೆಳಕಿನ ಹಾದಿಯನ್ನು ಸುಗಮಗೊಳಿಸುತ್ತವೆ ಎಂದು ಹೇಳಿ, ಇದನ್ನು ನಾನು ಹೇಳಿಲ್ಲ, ಸಾವಿತ್ರಿ ಬಾಯಿ ಫುಲೆ ಅವರು ಹೇಳಿದ್ದು ಎಂದಿದ್ದಾರೆ.  ದೇವಸ್ಥಾನಕ್ಕೆ ಹೋಗುವ ಹಾದಿ ಯಾವತ್ತಿದ್ದರೂ ಮಾನಸಿಕ ಗುಲಾಮಗಿರಿಯ ಹಾದಿ, ಸಾವಿತ್ರಿ ಬಾಯಿ ಫುಲೆಯವರು ದೇಶದಲ್ಲಿ ಮಹಿಳೆಯರು […]

ಬೆಂಗಳೂರಿನಲ್ಲಿ ಹೆಚ್ಚಾದ ಏರ್ ಪೊಲ್ಯೂಷನ್ ಡಿಸಾಡರ್

ಬೆಂಗಳೂರು:ಮಹಿಳೆಯರಿಗೆ ಉಚಿತ ಬಸ್ ಸೇವೆ, ಮೆಟ್ರೋ ಫೀಡರ್ ಬಸ್‌ಗಳು ಸೇರಿದಂತೆ ನಗರ ರಸ್ತೆ ಸಾರಿಗೆ ಸಂಚಾರಕ್ಕೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಆದರೂ ನಗರದಲ್ಲಿ ವಾಯು ಮಾಲಿನ್ಯ, ಟ್ರಾಫಿಕ್ ಕಡಿಮೆಯಾಗಿಲ್ಲ. ಇದೀಗ ವಾಯು ಮಾಲಿನ್ಯ ಜನರ ಜೀವಕ್ಕೆ ಕುತ್ತು ತಂದಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಏರ್ ಪೊಲ್ಯೂಷನ್ ಡಿಸಾಡರ್ ಸದ್ದಿಲ್ಲದೆ ಏರಿಕೆಯಾಗುತ್ತಿದೆ. ಏರ್ ಪೊಲ್ಯೂಷನ್ ಡಿಸಾಡರ್‌ಗೆ ಸಿಟಿ ಮಂದಿ ಬಲಿಯಾಗುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಏರ್ ಪೊಲ್ಯೂಷನ್ ಮಾರಕವಾಗುತ್ತಿದೆ. ಈ ಬಗ್ಗೆ ಅಧ್ಯಯನ ನಡೆಸಲು ರಾಜೀವ […]

ಕಾಂಗ್ರೆಸ್‌ನವರು ವೋಟಿಗಾಗಿ ಕಾಶ್ಮೀರ ಸಹ ಪಾಕಿಸ್ತಾನಕ್ಕೆ ಸೇರಿದ್ದು ಅಂತಾರೆ

ಬೆಂಗಳೂರು:ಕಾಂಗ್ರೆಸ್‌ನವರ ಮನಸ್ಥಿತಿ ಹೇಗಿದೆ ಅಂದ್ರೆ, ವೋಟಿಗಾಗಿ ಕಾಶ್ಮೀರ ಸಹ ಪಾಕಿಸ್ತಾನಕ್ಕೆ ಸೇರಿದ್ದು ಅಂತಾರೆ ಎಂದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಕಿಡಿ ಕಾರಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರಿಂದು, ಸ್ವಾತಂತ್ರ‍್ಯ ಪೂರ್ವದಲ್ಲಿ ಬೆಳಗಾವಿ ಮಹರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಅಸಮಾಧಾನ ಹೊರಹಾಕಿದ್ದಾರೆ.ಬೆಳಗಾವಿ ವಿಶಾಲ ಕರ್ನಾಟಕಕ್ಕೆ ಸೇರಿ ಅನೇಕ ವರ್ಷಗಳಾಗಿವೆ, ಅದು ಮುಗಿದ ಕತೆ. ಆದ್ರೆ ವೋಟಿನ ರಾಜಕಾರಣಕ್ಕೆ ಸಚಿವೆ ನೀಡಿರುವ ಹೇಳಿಕೆ ವಿಷಾದಕರ. ಸದ್ಯ ಕಾಂಗ್ರೆಸ್‌ನವರ ಮನಸ್ಥಿತಿ ಹೇಗಿದೆ ಅಂದ್ರೆ, ಕಾಶ್ಮೀರ ಕೂಡ ಪಾಕಿಸ್ತಾನಕ್ಕೆ […]

ದೇವೇಗೌಡರ ಮೂಲಕ ಟಿಕೆಟ್ ಲಾಬಿಬಿಜೆಪಿ ನಾಯಕರ ಭೇಟಿ ರಹಸ್ಯ ಏನು?

ಬೆಂಗಳೂರು:ವಿಧಾನಸಭೆ ಚುನಾವಣೆಯಲ್ಲಿ ಸೋತ ಬಿಜೆಪಿ ನಾಯಕರು ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಜೆಡಿಎಸ್ ವರಿಷ್ಠ ದೇವೇಗೌಡರ ಮೂಲಕ ಹೈಕಮಾಂಡ್ ಬಳಿ ಟಿಕೆಟ್ ಲಾಬಿ ಮಾಡಲು ಪ್ಲ್ಯಾನ್ ನಡೆಸಿದ್ದಾರೆ ಎನ್ನಲಾಗುತ್ತಿದೆ.ಮಾಜಿ ಸಚಿವ ಸೋಮಣ್ಣ, ಸಿಟಿ ರವಿ, ದೇವೇಗೌಡರು ಹಾಗೂ ಕುಮಾರಸ್ವಾಮಿಯನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಸೋಲಿನ ಹತಾಶೆಯಿಂದ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಬಂದಿರುವ ಸೋಮಣ್ಣ ದೇವೇಗೌಡರ ಮೂಲಕ ಬಿಜೆಪಿ ಹೈಕಮಾಂಡ್ ಬಳಿ ಟಿಕೆಟ್ ಗಿಟ್ಟಿಸಿಕೊಳ್ಳುವ ಕಸರತ್ತು ನಡೆಸುತ್ತಿದ್ದಾರೆ.ಭೇಟಿಯ ರಹಸ್ಯ ಏನು?ತುಮಕೂರು, ಬೆಂಗಳೂರು ಉತ್ತರದ ಮೇಲೆ […]

ಡಿಕೆಶಿ ಅಧಿಕಾರದ ಮದದಿಂದ ಮಾತನಾಡ್ತಿದ್ದಾರೆ

ಬೆಂಗಳೂರು:ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅಧಿಕಾರದ ಮದದಿಂದ ಮಾತನಾಡುತ್ತಿದ್ದಾರೆ. ಇದು ಅವರಿಗೆ ಗೌರವ ತರುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಲೋಕಸಭೆ ಚುನಾವಣೆಯ ಪೂರ್ವತಯಾರಿಗಳ ಕುರಿತು ಚರ್ಚಿಸಲು ಬಿಜೆಪಿ ಯಲಹಂಕದಲ್ಲಿರುವ ರೆಸಾರ್ಟ್ವೊಂದರಲ್ಲಿ ಹೈವೋಲ್ಟೇಜ್ ಸಭೆ ಹಮ್ಮಿಕೊಂಡಿದೆ. ಸಭೆಯಲ್ಲಿ ಬಿಎಸ್‌ವೈ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ, ಅರವಿಂದ್ ಲಿಂಬಾವಳಿ ಸೇರಿದಂತೆ ಅನೇಕ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.ಈ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಅವರು, ಡಿಸಿಎಂ […]

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಕೇಸ್‌ – ಅಪರಾಧಿಗಳ ಬಿಡುಗಡೆ ಮಾಡಿದ ಗುಜರಾತ್‌ ಸರ್ಕಾರದ ಆದೇಶ ರದ್ದು

ನವದೆಹಲಿ : 2002ರ ಗುಜರಾತ್ ಗಲಭೆಯಲ್ಲಿ (Gujarat Riots) ಸಂಭವಿಸಿದ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಅಪರಾಧಿಗಳ ಅವಧಿಗೆ ಮುನ್ನ ಬಿಡುಗಡೆಗೆ ಅವಕಾಶ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 11 ಜನರನ್ನು ಅಕಾಲಿಕವಾಗಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಬಳಿಕ ಈ ತೀರ್ಪು ನೀಡಲಾಗಿದೆ.  ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಹನ್ನೊಂದು ಅಪರಾಧಿಗಳು ಎರಡು ವಾರಗಳಲ್ಲಿ ಜೈಲು […]

ತಾಯಿ-ಮಕ್ಕಳದ್ದು ಆತ್ಮಹತ್ಯೆಯಲ್ಲ, ಕೊಲೆಹತ್ಯೆ ಹಿಂದೆ ‘ರೀಲ್ಸ್ ಪ್ರಿಯತಮ’!

ಹಾಸನ:ಹೊಸವರ್ಷದಂದು ಹಾಸನದ ದಾಸರಕೊಪ್ಪಲಿನಲ್ಲಿ ನಡೆದಿದ್ದ ತಾಯಿ ಹಾಗೂ ಇಬ್ಬರು ಮಕ್ಕಳ ನಿಗೂಢ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜನವರಿ ೧ರಂದು ದಾಸರಕೊಪ್ಪಲಿನ ಮನೆಯಲ್ಲಿ ಶಿವಮ್ಮ ಎಂಬ ಮಹಿಳೆ ಹಾಗೂ ಆಕೆ ಮಕ್ಕಳಾದ ೧೦ ವರ್ಷದ ಪವನ್ ಹಾಗೂ ೭ ವರ್ಷದ ಸಿಂಚನಾ ನಿಗೂಢವಾಗಿ ಸಾವನ್ನಪ್ಪಿದ್ದರು. ಪತಿ ತೀರ್ಥಪ್ರಸಾದ್ ಮನೆಗೆ ಬಂದು ನೋಡಿದಾಗ ಗ್ಯಾಸ್ ಲೀಕ್ ಆಗಿದ್ದು, ಹೆಂಡತಿ, ಮಕ್ಕಳು ಸಾವನ್ನಪ್ಪಿದ್ದರು. ಇದೀಗ ಪೊಲೀಸ್ ತನಿಖೆ ವೇಳೆ ಮೂವರದ್ದು ಕೊಲೆ ಎನ್ನುವುದು ಗೊತ್ತಾಗಿದೆ. ಮಹಿಳೆಯ ಪ್ರಿಯಕರನೇ ನ್ಯೂ ಇಯರ್ […]

ಲೋಕಸಮರಕ್ಕೆ ಕಾಂಗ್ರೆಸ್- ಬಿಜೆಪಿ ತಯಾರಿ

ಬೆಂಗಳೂರು:ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಭಾರೀ ತಯಾರಿ ಆರಂಭಿಸಿಕೊAಡಿವೆ. ಎರಡೂ ಪಕ್ಷಗಳು ಸಂಘಟನೆಗೆ ಮುಂದಾಗಿದ್ದು, ಸಭೆಗಳನ್ನು ನಡೆಸುತ್ತಿವೆ. ಲೋಕಸಭಾ ಚುನಾವಣೆ ಸಿದ್ಧತೆ ಕುರಿತು ವಿವಿಧ ಹಂತದ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಲು ಕಾಂಗ್ರೆಸ್ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೆವಾಲ ಬೆಂಗಳೂರಿಗೆ ಬರುತ್ತಿದ್ದಾರೆ. ನಾಳೆ ಹಾಗೂ ನಾಡಿದ್ದು ಕಾಂಗ್ರೆಸ್‌ನಿAದ ಲೋಕಸಭೆ ತಂತ್ರಗಾರಿಕೆ ಸಭೆ ನಡೆಯಲಿದೆ.ನಾಳೆ ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ನಾಡಿದ್ದು ಕಾಂಗ್ರೆಸ್ ಶಾಸಕರು, ವಿಧಾನಪರಿಷತ್ ಸದಸ್ಯರು, ಸಚಿವರೊಂದಿಗೆ ಸಭೆ ನಡೆಯಲಿದೆ.ಇನ್ನು […]