September 15, 2026

ಫೆ.29 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ

ಬೆಂಗಳೂರು:ಮುಖ್ಯಮAತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಜರುಗಿದ ಸಂಘಟನಾ ಸಮಿತಿ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು.ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯನ್ನು ಫೆಬ್ರವರಿ 29ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಲಾಗಿದೆ ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ […]

ಕಾಂಗ್ರೆಸ್ ನಾಯಕ ಹರಿಪ್ರಸಾದ್‌ಗೆ ನೋಟಿಸ್ ಕೊಡೋದಿಲ್ಲ

ಬೆಂಗಳೂರು:ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ವಿವಾದದ ಹೇಳಿಕೆಗೆ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಹೇಳಿಕೆ ಬಗ್ಗೆ ಗೃಹ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಅಂತಹ ಮಾಹಿತಿ ಬಂದರೆ, ಅದನ್ನ ಹ್ಯಾಂಡಲ್ ಮಾಡೋಕೆ ನಮ್ಮ ಇಲಾಖೆ ಸಮರ್ಥವಾಗಿ ಇದೆ. ಅಂತಹ ಘಟನೆಗಳು ಆಗೋಕೆ ನಾವು ಬಿಡೊಲ್ಲ. ಸಂದರ್ಭ ಬಂದರೆ ಹರಿಪ್ರಸಾದ್ […]

ಭಯ ಹುಟ್ಟಿಸುವವರು ಭಯೋತ್ಪಾದಕರುಹರಿಪ್ರಸಾದ್ ಹೇಳಿಕೆಗೆ ಪೇಜಾವರ ಶ್ರೀ ಕೆಂಡ

ವಿಜಯಪುರ:ಯಾರು ಹೇಳಿಕೆಗಳ ಮೂಲಕ ಭಯೋತ್ಪಾದನೆ ಮಾಡಬಾರದು. ಹೆಳಿಕೆಗಳಿಂದ ಭಯ ಹುಟ್ಟಿಸುವವರು ಭಯೋತ್ಪಾದಕರು ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ವಿರುದ್ಧ ಪೇಜಾವರ ಶ್ರೀಗಳು ಕಿಡಿಕಾರಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಧ್ರಾ ಮಾದರಿಯ ಘಟನೆ ಮರುಕಳಿಸಬಹುದು ಎಂಬ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ, ಯಾಕೆ ನೇರವಾಗಿ ಇಲಾಖೆಗಳಿಗೆ ಹೋಗಿ ಮಾಹಿತಿ ನೀಡುತ್ತಿಲ್ಲ? ಇವರು ಯಾರನ್ನು ರಕ್ಷಣೆ ಮಾಡುತ್ತಿದ್ದಾರೆ? ಕೇಳಿದ್ರೆ ಹೇಳುತ್ತೇವೆ ಎನ್ನುವುದು ವಿಧ್ವಂಸಕ ಕೃತ್ಯ ನಡೆಯಲಿ ಎಂದAತೆ ಅಲ್ಲವೇ? ಇವರು ವಿಧ್ವಂಸಕ ಕೃತ್ಯ ನಡೆಸುವವರನ್ನ […]

ಶ್ರೀರಾಮ ಮಾಂಸಾಹಾರಿಯಾಗಿದ್ದ.. ಬೇಟೆಯಾಡಿ ತಿನ್ನುವ ರಾಮ ನಮ್ಮವ: ಎನ್‌ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ

ನವದೆಹಲಿ: ಭಗವಾನ್‌ ರಾಮ ‘ಬಹುಜನ’ರಿಗೆ ಸೇರಿದವನು. ರಾಮ ಮಾಂಸಾಹಾರಿಯಾಗಿದ್ದ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಶರದ್ ಪವಾರ್ ಬಣದ ನಾಯಕ ಜಿತೇಂದ್ರ ಅವ್ಹಾದ್ ಅವರು ಭಗವಾನ್ ರಾಮನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜನವರಿ 22 ರಂದು ಅಯೋಧ್ಯೆಯ ಪವಿತ್ರೀಕರಣ ಸಮಾರಂಭದ ದಿನದಂದು ಒಂದು ದಿನದ ಮದ್ಯ ಮತ್ತು ಮಾಂಸವನ್ನು ನಿಷೇಧಿಸುವಂತೆ ಬಿಜೆಪಿ ಶಾಸಕ ರಾಮ್ ಕದಮ್ ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಜಿತೇಂದ್ರ ಈ ಹೇಳಿಕೆ ನೀಡಿದ್ದಾರೆ.  ರಾಮ ನಮ್ಮವನು. ರಾಮ ಬಹುಜನರಿಗೆ ಸೇರಿದವನು. […]

ನಾನೂ ಕರಸೇವಕ, ನನ್ನನ್ನೂ ಬಂಧಿಸಿ – ಅಭಿಯಾನ ಆರಂಭಿಸಿದ್ದ ಸುನಿಲ್‌ ಕುಮಾರ್‌ ವಶಕ್ಕೆ

ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ ನಿತ್ಯ ಪ್ರತಿಭಟನೆ ನಡೆಸಲು ಮುಂದಾಗಿದ್ದು ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು, ನಾನೂ ಕರಸೇವಕ. ನನ್ನನ್ನೂ […]

ನಾನು ಅಯೋಧ್ಯೆಗೆ ಹೋಗಲ್ಲ: ಸಿದ್ಧಲಿಂಗ ಶ್ರೀ

ತುಮಕೂರು:ಅಯ್ಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆಗೆ ನನಗೂ ಕೂಡ ಆಹ್ವಾನ ಬಂದಿದೆ. ಆದರೆ ನಾನು ಹೋಗಲು ಆಗುವುದಿಲ್ಲ. ಕಾರಣ ಅದೇ ದಿನದಂದು ಲಿಂಗೈಕ್ಯ, ಪರಮ ಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೫ನೇ ವರ್ಷದ ಪುಣ್ಯ ಸ್ಮರಣೆ ಇರುವ ಕಾರಣ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ನಾನು ಹೋಗಲು ಆಗುವುದಿಲ್ಲ ಎಂದು ಸಿದ್ದಗಂಗಾ ಮಠದ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಸ್ಪಷ್ಟಪಡಿಸಿದರು.ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಉದ್ಘಾಟನೆಯ ಮುನ್ನ ದಿನವೇ ಅಂದರೆ […]

ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೇ ತೊಂದರೆ

ದಾವಣಗೆರೆ:ನಮ್ಮ ದೇಶ ಹಿಂದೂ ರಾಷ್ಟ್ರ ಆಗಬಾರದು. ಹಿಂದೂ ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ಇದನ್ನು ಅಂಬೇಡ್ಕರ್ ಅವರೇ ಹೇಳಿದ್ದಾರೆ. ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೇ ತೊಂದರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.ದಾವಣಗೆರೆಯ ರುದ್ರನಕಟ್ಟೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನ ಥರನೇ ಆಗುತ್ತದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ. ದೇಶ […]

ಬಿ.ಕೆ ಹರಿಪ್ರಸಾದ್‌ಗೆ ಮಂಪರು ಪರೀಕ್ಷೆ ಮಾಡಿಸಬೇಕು

ಕೊಪ್ಪಳ:ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅಂತವರು ಗಲಭೆಗೆ ಪ್ರಚೋದನೆ ನೀಡುವಂತಿದ್ದು, ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸ ಬೇಕು ಎಂದು ಸಂಸದ ಸಂಗಣ್ಣ ಕರಡಿ ಒತ್ತಾಯಿಸಿದ್ದಾರೆ.ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಮಮಂದಿರ ಉದ್ಘಾಟನೆಗೆ ತೆರಳುವ ಕರ ಸೇವಕರಿಂದ ಮತ್ತೊಮ್ಮೆ ಗೋಧ್ರಾ ಮಾದರಿ ಗಲಭೆ ನಡೆಯಬಹುದು ಎಂಬ ಹರಿಪ್ರಸಾದ್ ಮಾತಿಗೆ ತಿರುಗೇಟು ನೀಡಿದರು. ಹರಿಪ್ರಸಾದ್ ಅವರ ಭಾವನೆ ಏನಿದೆ ಎಂಬುದು ನನಗೆ ಗೊತ್ತಿಲ್ಲ. ಇಂತಹ ಹೇಳಿಕೆಗಳನ್ನು ಅಡ್ವಾನ್ಸ್ ಕೊಡುತ್ತಾರೆ ಅಂದರೆ ಇದರ ಅರ್ಥ ಏನು ಎಂದು ಪ್ರಶ್ನಿಸಿದ ಸಂಸದ ಸಂಗಣ್ಣ ಕರಡಿ, ಹೀಗೆ […]

ಬೆಳಗ್ಗೆ ಕೆಲಸಕ್ಕೆ ಸೇರಿದ, ಮಧ್ಯಾಹ್ನ ಮಾಲೀಕನ ಮಗಳನ್ನೆ ಕಿಡ್ನ್ಯಾಪ್ ಮಾಡಿದ!

ಬೆಂಗಳೂರು:ವ್ಯಕ್ತಿಯೊಬ್ಬ ಫರ್ನಿಚರ್ ಅಂಗಡಿಯೊAದರಲ್ಲಿ ಕೆಲಸಕ್ಕೆ ಸೇರಿ ಅದೇ ದಿನ ಮಧ್ಯಾಹ್ನ ಮಾಲೀಕನ 4 ವರ್ಷದ ಮಗಳನ್ನೇ ಅಪಹರಿಸಿಕೊಂಡು ಹೋದ ಘಟನೆ ಬೆಂಗಳೂರಿನ ಬನಶಂಕರಿ ಠಾಣೆ ವ್ಯಾಪ್ತಿಯ ಕಾವೇರಿಪುರದಲ್ಲಿ ಇತ್ತೀಚೆಗೆ ನಡೆದಿದೆ. ಡಿಸೆಂಬರ್ 28ರಂದು ಆರೋಪಿಯು ಕೃತ್ಯ ಎಸಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ವಸೀಂ ಎಂದು ಗುರುತಿಸಲಾಗಿದೆ. ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ಬನಶಂಕರಿ ಠಾಣೆ ವ್ಯಾಪ್ತಿಯ ಕಾವೇರಿಪುರದಲ್ಲಿರುವ ಶಫೀವುಲ್ಲ ಎಂಬುವವರ ಫರ್ನಿಚರ್ ಶಾಪ್‌ಗೆ ಆರೋಪಿ ವಸೀಂ ಡಿಸೆಂಬರ್ ೨೮ರ ಬೆಳಗ್ಗೆ ಕೆಲಸಕ್ಕೆ ಸೇರಿದ್ದಾನೆ. ಈ […]

ಒಬ್ಬ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು

ಬೆಂಗಳೂರು:ಕರಸೇವಕನ ಬಂಧನ ಖಂಡಿಸಿ ಬಿಜೆಪಿ ನಡೆಸಿರುವ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮAಡಲರಾಗಿದ್ದಾರೆ. ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧ ಬೇಕಾದ್ರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.ಜೈಲಲ್ಲಿ ಹಿಂದೂಗಳೇ ಹೆಚ್ಚಿದ್ದಾರೆ. […]