ಚಾಕುವಿನಿಂದ ಇರಿದು ಕೊಲೆ
ಬಳ್ಳಾರಿ:ಹೊಸ ವರ್ಷದ ಸಂಭ್ರಮಾಚರಣೆಗೂ ಮುನ್ನಾ ದಿನದಂದೇ ಚಾಕು ಇರಿದು ಓರ್ವ ಕೊಲೆಯಾದ ಘಟನೆ ಗಣಿನಾಡು ಬಳ್ಳಾರಿ ನಗರದ ವಡ್ಡರಬಂಡೆಯಲ್ಲಿ ನಡೆದಿದೆ. ಹೊಸ ವರ್ಷದ ಆಚರಣೆಗಾಗಿ ಕೇಕ್ ತರಲು ಸಹೋದರರಿಬ್ಬರು ಹೋಗಿದ್ದ ವೇಳೆ ಬೇಕರಿಯೊಂದರ ಬಳಿ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಆರ್.ಕೆ.ಕಾಲೋನಿಯ ನಿವಾಸಿ ಸೈಯದುಲ್ಲಾ (24) ಮೃತಪಟ್ಟಿದ್ದು, ಮತ್ತೋರ್ವ ಬಾಪೂಜಿ ನಗರದ ನಿವಾಸಿ ರಜಾಕ್ ವಲಿ (26) ತೀವ್ರ ಗಾಯಗೊಂಡಿದ್ದು, ವಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕೇಕ್ ತರಲು ಹೋಗಿದ್ದ ವೇಳೆ ಪಾರ್ಕಿಂಗ್ ಮಾಡಿದ್ದ ಬೈಕ್ ಗೆ […]







































































































































































































































































































































































































































































































































































































































































































































































































































































































































































































































































































































