July 28, 2026
#ಬೆಂಗಳೂರು

ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ

ಬೆಂಗಳೂರು:
ಸಿಎಂ ಸಿದ್ದರಾಮಯ್ಯ, ಎಂಎಲ್‌ಸಿ ಃಏ ಹರಿಪ್ರಸಾದ್ ಮತ್ತು ಮಾಜಿ ಶಾಸಕ ಯತೀಂದ್ರ ಒಂದೊAದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಕೆ ಹರಿಪ್ರಸಾದ್ ಅವರಿಗೆ ಮಾಹಿತಿ ಇದ್ದರೆ ಗೃಹ ಇಲಾಖೆಗೆ ಕೊಡಲಿ. ದಾಖಲೆ ಕೊಡಿ, ನಮಗೂ ಕೊಡಿ ಮಾಧ್ಯಮಗಳಿಗೆ ಕೊಡಿ ಎಂದು ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ನಾನು ದುಡ್ಡು ಕೊಟ್ಟಿದ್ದೇನೆ ಅಂತಾ ಹೇಳಿದ್ದಾರೆ. ಶೆಟ್ಟರ್‌ಗಿಂತಲೂ ನಾನು ಹೆಚ್ಚು ಹಣ ಸಂಗ್ರಹ ಮಾಡಿಕೊಟ್ಟಿದ್ದೇನೆ ಎಂದಿದ್ದಾರೆ.
ಶ್ರೀರಾಮಮAದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನ ವಿಚಾರವಾಗಿ ಮಾತನಾಡಿದ ಅವರು, ಅಂದು ಪೂಜೆಗೆ ಯಾರು ಅವಶ್ಯಕವಾಗಿ ಬೇಕೋ ಅವರಿಗಷ್ಟೇ ಆಹ್ವಾನ ನೀಡಲಾಗಿದೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಗೂ ಆಹ್ವಾನ ಹೋಗಿದೆ. ಆದರೆ ಕಾರ್ಯಕ್ರಮಕ್ಕೆ ಸೋನಿಯಾ, ಖರ್ಗೆ ಹೋಗ್ತಾರೋ ಇಲ್ಲವೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಶ್ರೀಕಾಂತ್ ಪೂಜಾರಿ ಮೇಲೆ ಸಿಎಂ ಬ್ರಹ್ಮಾಸ್ತ್ರ ಮುಂದುವರಿಸಿದ್ದಾರೆ
ಶ್ರೀಕಾAತ್ ಪೂಜಾರಿ ಮೇಲೆ ಸಿಎಂ ಸಿದ್ದರಾಮಯ್ಯ ಬ್ರಹ್ಮಾಸ್ತ್ರ ಮುಂದುವರಿಸಿದ್ದಾರೆ. ಶ್ರೀಕಾಂತ್ ಪೂಜಾರಿ ಮೇಲೆ ಬಹಳಷ್ಟು ಕೇಸ್‌ಗಳಿವೆ ಅಂತಾ ಹೇಳುತ್ತಾರೆ. ಶ್ರೀಕಾಂತ್ ಪೂಜಾರಿ ಅಮಾಯಕ, ಆಟೋ ಡ್ರೈವರ್. ರಾಮಮಂದಿರ ಕಾರ್ಯಕ್ರಮ ಸಂದರ್ಭದಲ್ಲಿ ಬಂಧಿಸುವ ಅಗತ್ಯವೇನಿತ್ತು? ಶ್ರೀಕಾಂತ್ ಪೂಜಾರಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ ಅಂತೀರಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಬಿ.ನಾಗೇಂದ್ರ ವಿರುದ್ಧ ಯಾವ ಕೇಸ್ ಇದೆ ಎಂದು ಪ್ರಶ್ನಿಸಿದ್ದಾರೆ.
ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್ ತಾನೇ ಇದ್ದಿದ್ದು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೇಲ್ ಮೇಲೆ ಹೊರಗೆ ಬಂದಿದ್ದಾರೆ. ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದಿದ್ದಾರೆ.
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಶಾಸಕ ಅಭಯ್ ಪಾಟೀಲ್ ಕಿಡಿ
‘ಮತ್ತೊಂದು ಗೋಧ್ರಾ ಹತ್ಯಾಕಾಂಡ ಆಗದಂತೆ ನೋಡಿಕೊಳ್ಳಿ’ ಎಂಬ ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಶಾಸಕ ಅಭಯ್ ಪಾಟೀಲ್ ಪ್ರತಿಕ್ರಿಯಿಸಿದ್ದು, ಗೋಧ್ರಾ ಹತ್ಯಾಕಾಂಡ ಪ್ರಾರಂಭ ಮಾಡಿದವರು ಯಾರು? ಬಹುತೇಕ ಹರಿಪ್ರಸಾದ್ ಮಾಡ್ತಿರಬಹುದು. ರೈಲಿನಲ್ಲಿ ರಾಮ ಭಕ್ತರನ್ನು ಸುಡುವ ಸಂಚು ಮಾಡಿದವರು ಯಾರು? ಬಿ.ಕೆ.ಹರಿಪ್ರಸಾದ್ ಬಹುತೇಕ ಆ ಯೋಜನೆ ಹಾಕಿದಂತೆ ಕಾಣಿಸುತ್ತೆ. ಈ ರೀತಿ ಹತ್ಯಾಕಾಂಡ ಮಾಡಿ ಸಿಎಂರನ್ನು ಕೆಳಗಿಳಿಸುವ ಪ್ರಯತ್ನ ಎಂದು ಆರೋಪಿಸಿದ್ದಾರೆ.

Leave a comment

Your email address will not be published. Required fields are marked *