ರಾಜ್ಯದ ಜನತೆಗೆ ಕರೆಂಟ್ ಶಾಕ್ವಿದ್ಯುತ್ ದರ ಏರಿಕೆಗೆ ಚಿಂತನೆ
ಬೆಂಗಳೂರು:
ವಿದ್ಯುತ್ ದರ ಏರಿಕೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಚಿಂತನೆ ನಡೆಸಿದೆ.
ಪ್ರತಿ ಯೂನಿಟ್ಗೆ 50-60 ಪೈಸೆ ಏರಿಕೆಗೆ ಎಸ್ಕಾಂಗಳು ಕೆಇಆರ್ಸಿ ಮುಂದೆ ಪ್ರಸ್ತಾವನೆ ಇಟ್ಟಿವೆ. ಇದರಿಂದ ಈ ವರ್ಷ ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಯೂನಿಟ್ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಇಆರ್ಸಿ ಮುಂದಾಗಿದೆ.
ಸದ್ಯ ಪ್ರಸ್ತಾವನೆ ಪರಿಶೀಲಿಸಲಿರುವ ಆಯೋಗ, ಗ್ರಾಹಕ ಮತ್ತು ಬೆಸ್ಕಾಂ ಇಬ್ಬರಿಗೂ ಹೊರೆಯಾಗದಂತೆ ಏಪ್ರಿಲ್ ೧ ರಿಂದಲೇ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ. ಬೆಸ್ಕಾಂ ಮಾತ್ರವಲ್ಲದೇ ಉಳಿದ ನಾಲ್ಕು ಎಸ್ಕಾಂಗಳಿAದಲೂ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ನಾಲ್ಕು ಎಸ್ಕಾಂಗಳಿAದ 50-60 ಪೈಸೆ ದರ ಪರಿಷ್ಕರಣೆಗೆ ಪ್ರಸ್ತಾಪ ಸಲ್ಲಿಕೆಯಾಗಿದೆ.
ಎಲ್ಲಾ ಪರಿಷ್ಕೃತ ದರಗಳು ಏಪ್ರಿಲ್ 1 ರಿಂದಲೇ ಜಾರಿಯಾಗುವ ಸಾಧ್ಯತೆ ಇದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ತಟ್ಟಲಿದೆ.













































































































































































































































































































































































































































































































































































































































































































































































































































































































































































































































































































































