ಹರಿಪ್ರಸಾದ್ರನ್ನು ಕೂಡಲೇ ಬಂಧಿಸಬೇಕು: ಡಿವಿಎಸ್ ಆಗ್ರಹ
ಬೆಂಗಳೂರು:ಕೂಡಲೇ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅವರನ್ನು ಸರ್ಕಾರ ಬಂಧಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಸದಾನಂದಗೌಡ ಆಗ್ರಹಿಸಿದ್ದಾರೆ.ಹುಬ್ಬಳ್ಳಿಯಲ್ಲಿ ರಾಮ ಮಂದಿರ ನಿರ್ಮಾಣ ಹೋರಾಟದಲ್ಲಿ ಭಾಗಿಯಾಗಿದ್ದ, ೩೧ ವರ್ಷದ ಹಳೆಯ ಪ್ರಕರಣಗಳನ್ನು ಕೆದಕಿ ಶ್ರೀಕಾಂತ್ ಪೂಜಾರಿ ಸೇರಿದಂತೆ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲೂ ಪ್ರತಿಭಟನೆ ನಡೆಸುತ್ತಿದೆ.ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಮಾಧ್ಯಮಗಳ ಜೊತೆ ಮಾತನಾಡಿದ ಡಿವಿಎಸ್, ರಾಷ್ಟ್ರೀಯ ನಾಯಕರೊಬ್ಬರು ಹೀಗೆ ಮಾತನಾಡುತ್ತಾರೆ ಅಂದರೆ ದೊಡ್ಡ ಪಿತೂರಿ ಮಾಡಿದಂತೆ […]







































































































































































































































































































































































































































































































































































































































































































































































































































































































































































































































































































































