ಕೋಳಿ ತೂಕದಲ್ಲಿ ಮೋಸ:ವಂಚನೆಗೈದವರನ್ನು ಮರಕ್ಕೆ ಕಟ್ಟಿ ಹಾಕಿದ ರೈತ
ಮಂಡ್ಯ:ಮಾಂಸದ ಕೋಳಿ ತುಂಬುವಾಗ ತೂಕದಲ್ಲಿ ವಂಚನೆಗೈದವರನ್ನು ರೈತರೊಬ್ಬರು ಮರಕ್ಕೆ ಕಟ್ಟಿ ಹಾಕಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಗ್ರಾಮದಲ್ಲಿ ಜರುಗಿದೆ.ಚಿಕ್ಕಬ್ಯಾಡರಹಳ್ಳಿ ಗ್ರಾಮದ ರೈತ ಹನುಮಂತೇಗೌಡ ಅವರು ಕೋಳಿಫಾರಂ ನಡೆಸುತ್ತಿದ್ದು, ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದರು. ಕೋಳಿ ಖರೀದಿಸಲು ಬರುತ್ತಿದ್ದ ಮೈಸೂರು ಮೂಲದ ಎನ್ಆರ್ ಚಿಕನ್ ಕಂಪನಿಯ ಸಿಬ್ಬಂದಿ ಕಳೆದ ಮೂರ್ನಾಲ್ಕು ತಿಂಗಳಿನಿAದ ಈ ರೈತನಿಗೆ ಕೋಳಿ ತುಂಬುವಾಗ ತೂಕದಲ್ಲಿ ಮೋಸ ಮಾಡುತ್ತಿದ್ದರು.ಅನುಮಾನಗೊಂಡ ರೈತ ಬೇರೆ ತೂಕದ ಯಂತ್ರ ತರಿಸಿ ತೂಕ ಹಾಕಿಸಿದಾಗ ವಂಚನೆ ಬೆಳಕಿಗೆ ಬೆಳಕಿಗೆ […]







































































































































































































































































































































































































































































































































































































































































































































































































































































































































































































































































































































