September 18, 2026

ನಮ್ಮ ಸರ್ಕಾರ ಜಾತಿಗಣತಿ ವರದಿ ಬಿಡುಗಡೆ ಮಾಡಲಿದೆ

ಬೆಂಗಳೂರು: ನಮ್ಮ ಸರ್ಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲಿದೆ. ಜಾತಿಗಣತಿ ಬಿಡುಗಡೆಯಿಂದ ಮೀಸಲಾತಿ ನೀಡಲು ಅನುಕೂಲ ಆಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಜಾತಿಗಣತಿ ಬಿಡುಗಡೆ ವಿಚಾರ‌ವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು,ಜಾತಿ ಗಣತಿಯನ್ನು ನಮ್ಮ ಸರ್ಕಾರ ಬಿಡುಗಡೆ ಮಾಡುತ್ತದೆ. ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಆದಷ್ಟು ಬೇಗ ವರದಿ ಸರ್ಕಾರಕ್ಕೆ ಕೊಡುತ್ತೇನೆ ಎಂದು ಹೇಳಿದ್ದಾರೆ. ಆ ವರದಿ ಬಂದ ಮೇಲೆ ಚರ್ಚೆ ಮಾಡುತ್ತೇವೆ. ವರದಿ ಬಂದರೆ ಯಾವ ಯಾವ ಸಮುದಾಯಗಳು ಎಷ್ಟು ಇದ್ದಾರೆ ಎನ್ನುವುದು […]

ಹಿಂದೂ ಕಾರ್ಯಕರ್ತರ ವಿರುದ್ಧ ಮಾತ್ರನಾ ನಿಮ್ಮ ಪೌರುಷ

ಬೆಂಗಳೂರು: ಬಾಲ ಬಿಚ್ಚಿದ್ರೆ ಬಾಲ ಕಟ್ ಮಾಡ್ತೀವಿ ಅಂತ ಮರಿ ಖರ್ಗೆ (ಪ್ರಿಯಾಂಕ್ ಖರ್ಗೆ) ಹೇಳಿದ್ರು. ಹಿಂದೂ ಕಾರ್ಯಕರ್ತರ ವಿರುದ್ಧ ಮಾತ್ರನಾ ನಿಮ್ಮ ಪೌರುಷ ಎಂದು ಮಾಜಿ ಸಚಿವ ಸಿ.ಟಿ. ರವಿ ಪ್ರಶ್ನಿಸಿದರು. ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಮತಾಂಧರ ಕಟೌಟ್ ಹಾಕಿದ ಉದ್ದೇಶ ಏನು? ವಿಭಜನೆಯಿಂದ ಇನ್ನೂ ನೀವು ಸಮಾಧಾನ ಆಗಿಲ್ಲ ಅಂತ ಅರ್ಥಾನಾ? ಭಾರತದಲ್ಲಿ ಮತ್ತೊಂದು ವಿಭಜನೆಗೆ ಸರ್ಕಾರ ಪ್ರೋತ್ಸಾಹ ಕೊಡ್ತಿದೆಯಾ? ಬಾಲ ಬಿಚ್ಚಿದ್ರೆ ಬಾಲ ಕಟ್ ಮಾಡ್ತೀವಿ ಅಂತ ಮರಿ […]

ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ- ನಾಲ್ವರು ಕಾರ್ಮಿಕರು ಗಂಭೀರ

ಮಂಗಳೂರು: ಮಾರ್ಬಲ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಕಾರ್ಮಿಕರು ಉತ್ತರ ಭಾರತ ಮೂದವರು ಎಂಬುದಾಗಿ ತಿಳಿದುಬಂದಿದೆ. ಘಟನೆ ವಿವರ: ಮಾರ್ಬಲ್ ಅನ್ ಲೋಡ್‍ಗಾಗಿ ಲಾರಿಯನ್ನು ರಿವರ್ಸ್ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಯಿತು. ಅಲ್ಲದೆ ಹೋಗಿ ನೀರಿನ ತೊಟ್ಟಿಗೆ ಬಿದ್ದಿದೆ. ಪರಿಣಾಮ ಲಾರಿಯಲ್ಲಿದ್ದ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ […]

ಬಿಜೆಪಿ ಕಾರ್ಯಕರ್ತರೇ ವೇಷ, ಹೆಸರು ಬದಲಿಸಿಕೊಂಡು ಕಿಡಿಗೇಡಿತನ ಮಾಡ್ತಾರೆ

ಬೆಂಗಳೂರು: ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿತನದಲ್ಲಿ ಭಾಗಿಯಾಗುತ್ತಾರೆ. ಈ ರೀತಿ ಗಲಾಟೆ ಹಾಗೂ ಗಲಭೆ ಮಾಡಿಸುವುದು ಅವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರು ಕಿತಾಪತಿ ಮಾಡಿ ಕಿತ್ತಾಟ ತಂದಿಡುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ಕೋಮುಗಲುಭೆ ಮಾಡಿಸುವುದು ಜಗಳ ಮಾಡಿಸುವುದು ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವ ಕೆಲಸವನ್ನ ಮೊದಲಿನಿಂದಲೂ ಬಿಜೆಪಿಗರು ಮಾಡಿಕೊಂಡು […]

ಉಡುಪಿ ಹಿಂದೂ ಸಮಾಜೋತ್ಸವಕ್ಕೆ ತಟ್ಟಿದ ಶಿವಮೊಗ್ಗ ಗಲಾಟೆ ಬಿಸಿ

ಉಡುಪಿ: ಶಿವಮೊಗ್ಗ ಈದ್ ಮಿಲಾದ್ ಮೆರವಣಿಗೆಯಲ್ಲಿ ನಡೆದ ಪುಂಡಾಟದ ಎಫೆಕ್ಟ್ ಉಡುಪಿಯ ಹಿಂದೂ ಸಮಾಜೋತ್ಸವದ ಮೇಲೆ ಬಿದ್ದಿದೆ. ಔರಂಗಜೇಬ್, ಟಿಪ್ಪು ಕಟೌಟ್ ಮಲೆನಾಡಿನ ಕಿಚ್ಚಿಗೆ ಕಾರಣವಾಗಿತ್ತು. ಈ ಕಾರಣಕ್ಕಾಗಿಯೇ ಉಡುಪಿ ಸಮಾಜೋತ್ಸವದ 30ಕ್ಕೂ ಹೆಚ್ಚು ಬ್ಯಾನರ್‌ಗಳಿಗೆ ಎಸ್‌ಪಿ ಕತ್ತರಿ ಹಾಕಿದ್ದಾರೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಈದ್ ಮಿಲಾದ್ ಮೆರವಣಿಗೆಯಲ್ಲಿ ಯುವಕರ ಗುಂಪು ಪುಂಡಾಟ ಮೆರೆದಿತ್ತು. ಈ ಘಟನೆ ನಡೆಯುತ್ತಿದ್ದಂತೆ ಸರ್ಕಾರ ಎಲ್ಲಾ ಜಿಲ್ಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ. […]

ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಬಿಜೆಪಿಯಿಂದ ಜಾಥಾ 

ಮೈಸೂರು: ಮಹಿಷಾ ದಸರಾ ಒಂದು ರೀತಿ ಅಸಹ್ಯ, ಅನಾಚಾರ. ಮಹಿಷಾ ದಸರಾ ಮೂಲಕ ದೆವ್ವವನ್ನು ದೇವರು ಮಾಡಲು ಹೊರಟ್ಟಿದ್ದಾರೆ. ಮಹಿಷಾ ದಸರಾ ಆಸ್ತಿಕರ ಭಾವನೆಗೆ ನೋವು ತರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ನಾಡಹಬ್ಬದ ಹಿನ್ನೆಲೆ ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟದಲ್ಲಿ  ಮಹಿಷಾಸುರನ ಪ್ರತಿಮೆ ಮುಂದೆ ಮಹಿಷಾ ದಸರಾ ಆಯೋಜನೆ ಮಾಡಲಾಗಿದೆ. ಇದಕ್ಕೆ ತಿರುಗೇಟಾಗಿ ಬಿಜೆಪಿ ಚಲೋ ಚಾಮುಂಡಿ ಬೆಟ್ಟ ಜಾಥಾ ಹಮ್ಮಿಕೊಂಡಿದೆ. ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಜಾಥಾ ಹಮ್ಮಿಕೊಳ್ಳಲಾಗಿದೆ. ಮಹಿಷಾ ದಸರಾ […]

ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ – ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

ಕೊಪ್ಪಳ: ಗಂಗಾವತಿ ನಗರದ ಗಾಂಧಿ ಸರ್ಕಲ್‌ ಸಮೀಪ ಇರುವ ದೊಡ್ಡ ಜಾಮಿಯಾ ಮಸೀದಿ ಮುಂದೆ ಗಣೇಶ ವಿಸರ್ಜನೆ ಮಾಡುವ ಮೆರವಣಿಗೆ ವೇಳೆ ಮಸೀದಿ ಮುಂದೆ ಪೂಜೆ ಮಾಡಿದ ಕಾರಣ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಸೆ.28 ರಂದು ಗಂಗಾವತಿಯ ಹಿಂದೂ ಮಹಾ ಮಂಡಳಿ ವತಿಯಿಂದ ನಡೆಯುತ್ತಿದ್ದ ಗಣೇಶ ವಿಸರ್ಜನೆ ವೇಳೆಯಲ್ಲಿ ಯುವಕರು ಮಸೀದಿ ಎದುರು ಮಂಗಳಾರತಿ ಮಾಡಿ, ‘ಗವಿ ಗಂಗಾಧರೇಶ್ವರ ಮಹಾ ರಾಜಕೀ ಜೈ’ ಎಂದು ಘೋಷಣೆ ಕೂಗಿದ ವೀಡಿಯೋ ವೈರಲ್ ಆಗಿತ್ತು. ಇದು ಕೋಮು ಗಲಭೆಗೆ ಪ್ರಚೋದನೆ […]

ಶಿವಮೊಗ್ಗ ಈದ್‌ ಮಿಲಾದ್‌ ಹಬ್ಬಕ್ಕೆ 5 ಕೋಟಿ ಸಂಗ್ರಹ ಫಂಡಿಂಗ್‌ ಮಾಡಿದವರ ಹಿಂದೆ ಬಿದ್ದ ಖಾಕಿ

ಶಿವಮೊಗ್ಗ: ಈ ಬಾರಿ ಈದ್ ಮಿಲಾದ್ ಹಬ್ಬವನ್ನು ಶಿವಮೊಗ್ಗದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಹಬ್ಬದ ಮೆರವಣಿಗೆ ವೇಳೆ ಕಪ್ಪು ಚುಕ್ಕೆ ಎಂಬಂತೆ ಕಲ್ಲು ತೂರಾಟ ನಡೆದು, ಕೋಮು ಗಲಭೆ ಸಹ ಉಂಟಾಗಿದೆ. ಅಷ್ಟಕ್ಕೂ ಅದ್ದೂರಿ ಹಬ್ಬ ಆಚರಣೆಗೆ 5 ಕೋಟ ರೂ.ಗೂ ಅಧಿಕ ಹಣ ಸಂಗ್ರಹವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಮಲೆನಾಡಿನ ಹಿಂದೂಗಳ ಹಬ್ಬ ಆಗಿರಬಹುದು, ಮುಸ್ಲಿಮರ ಹಬ್ಬ ಆಗಿರಬಹುದು ಬಹಳ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬವನ್ನುಬಹಳ ಅದ್ದೂರಿಯಾಗಿ […]

ನಮ್ಮವರು ಖಡ್ಗ ತೆಗೆದುಕೊಂಡರೆ ಡೈರೆಕ್ಟ್ ಪಾಕಿಸ್ತಾನಕ್ಕೆ ಹೋಗುತ್ತೀರಿ

SHARE ಯಾದಗಿರಿ: ನಮಗೆ ಖಡ್ಗ ತೋರಿಸುತ್ತೀರಾ? ನಮ್ಮವರು ಖಡ್ಗ ತೆಗೆದುಕೊಂಡರೆ ಡೈರೆಕ್ಟ್ ಆಗಿ ಪಾಕಿಸ್ತಾನಕ್ಕೆ ಹೋಗುತ್ತೀರಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಯಾದಗಿರಿಯ ಶಹಾಪುರದಲ್ಲಿ ಹಿಂದೂ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಮಾತನಾಡಿದ ಶಾಸಕ ಯತ್ನಾಳ್, ನೀವು ತಾಲಿಬಾನ್‌ಗಳಿಗೆ ಸಪೋರ್ಟ್ ಮಾಡುವ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದೆ. ನಾವು ಶಾಂತಿಯುತ ಗಣೇಶ ವಿಸರ್ಜನೆ ಮಾಡುತ್ತಿದ್ದೇವೆ. ಆದರೆ ಕೋಲಾರದಲ್ಲಿ ಖಡ್ಗ ಪ್ರದರ್ಶನ ಮಾಡಿದರು. ಶಿವಮೊಗ್ಗದಲ್ಲಿ ಔರಂಗಜೇಬ್, ಟಿಪ್ಪುವಿನ ಭಾವಚಿತ್ರ ಹಾಕಿ ನಮ್ಮ ಸಮಾಜಕ್ಕೆ ಸವಾಲು ಹಾಕಿದ್ದಾರೆ. ರಾಜ್ಯದಲ್ಲಿ ಮುಸ್ಲಿಂ […]

ಮಹಿಳೆಯರ ರಾಜಕೀಯ ಮೀಸಲಾತಿಗೆ ಮುನ್ನುಡಿ ಬರೆದದ್ದು ಕಾಂಗ್ರೆಸ್

ಬೆಂಗಳೂರು: ಈಗ ಕೇಂದ್ರ ಸರ್ಕಾರ ಜಾರಿ ಮಾಡಿದ್ದೀವಿ ಎಂದು ಹೇಳಿಕೊಳ್ಳುತ್ತಿರುವ ಮಹಿಳೆಯರ ರಾಜಕೀಯ ಮೀಸಲಾತಿಗೆ ಮುನ್ನುಡಿ ಬರೆದದ್ದು ಕಾಂಗ್ರೆಸ್ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಮಹಾತ್ಮ ಗಾಂಧಿ ಅವರ […]