September 16, 2026

ಫುಟ್‌ಪಾತ್‌ಗಳ ಒತ್ತುವರಿ ತೆರವು ವಿಚಾರಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರು:ನಗರದಲ್ಲಿ ಫುಟ್‌ಪಾತ್‌ಗಳ ಒತ್ತುವರಿ ತೆರವು ವಿಚಾರವಾಗಿ ಕ್ರಮ ಕೈಗೊಳ್ಳದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಬಿಬಿಎಂಪಿ ಜನಗಳಿಂದ ತೆರಿಗೆ ಸಂಗ್ರಹಿಸುತ್ತದೆ. ಸರಿಯಾದ ರಸ್ತೆ, ಫುಟ್‌ಪಾತ್ ನಿರ್ಮಿಸಲು ತೆರಿಗೆ ನೀಡುತ್ತೇವೆ. ಆದರೆ ರಸ್ತೆ, ಫುಟ್‌ಪಾತ್ ಸುಧಾರಿಸಲು ಬಿಬಿಎಂಪಿ ಮುಂದಾಗುತ್ತಿಲ್ಲ. ಒತ್ತುವರಿ ತೆರವಿಗೆ ಸ್ವಯಂಪ್ರೇರಿತ ಪಿಐಎಲ್ ದಾಖಲಿಸುತ್ತೇವೆ. ಕೆಲವರು ಫುಟ್‌ಪಾತ್‌ಗಳನ್ನು ಕಾರು ಪಾರ್ಕಿಂಗ್‌ಗಾಗಿ ಬಳಸುತ್ತಿದ್ದಾರೆ. ಎಲ್ಲಾ ಫುಟ್‌ಪಾತ್‌ಗಳ ಒತ್ತುವರಿಗಳನ್ನು ತೆರವುಗೊಳಿಸಬೇಕು. ಹೈಕೋರ್ಟ್ನ ಹಂಗಾಮಿ ಸಿಜೆ ಪಿ.ಎಸ್.ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡರಿದ್ದ ಪೀಠದಿಂದ ಸೂಚನೆ ನೀಡಲಾಗಿದೆ. ಫೆ.೧ರಂದು ಬಿಬಿಎಂಪಿ ಮುಖ್ಯ […]

೧ ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ,

ಬೆಂಗಳೂರು:ಬೆಂಗಳೂರು ನಗರ ಪೊಲೀಸರು ಡ್ರಗ್ಸ್ ಪೆಡ್ಲರ್‌ಗಳ ವಿರುದ್ಧ ಸಮರ ಸಾರಿದ್ದಾರೆ. ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ. ಅದರಂತೆ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ನಗರದಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ಏಳು ಜನ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಪುಲಿಕೇಶಿನಗರ, ಬಾಣಸವಾಡಿ, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ನಗರದ ಹಲವೆಡೆ ಆರೋಪಿಗಳು ಡ್ರಗ್ಸ್ ಮಾರುತ್ತಿದ್ದರು. 219 ಎಕ್ಸ್ಟೆಸಿ ಪಿಲ್ಸ್, ೫೦೫ ಗ್ರಾಂ ಎಂಡಿಎAಎ ಕ್ರಿಸ್ಟಲ್, 130 ಗ್ರಾಂ ತೂಕದ ಚರಸ್, […]

ಖರ್ಗೆ ವಿರುದ್ಧ ಅವಹೇಳನ; ಚಕ್ರವರ್ತಿ ಸೂಲಿಬೆಲೆಗೆ ರಿಲೀಫ್

ಬೆಂಗಳೂರು:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕಲಬುರಗಿ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿದೆ.ನ್ಯಾ.ರಾಜೇಂದ್ರ ಬಾದಾಮಿ ಅವರು ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ್ದಾರೆ. ಬಲವಂತದ ಕ್ರಮವನ್ನು ಜರುಗಿಸಬಾರದು ಎಂದು ಸೂಚನೆ ನೀಡಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಅವರು ದೂರು ನೀಡಿಲ್ಲ. ರಾಜಕೀಯ ವ್ಯಕ್ತಿ ದೂರು ನೀಡಿರುವುದು. ಜಾತಿನಿಂದನೆ ಮಾಡಿಲ್ಲ. ಜಾತಿನಿಂದನೆ ಹಾಕಲು ಸಾಧ್ಯವಿಲ್ಲ ಎಂದು ವಕೀಲ ಅರುಣ್ ಶಾಂ ವಾದ ಮಂಡಿಸಿದ್ದರು. ವಾದ ಆಲಿಸಿದ […]

ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲೂ ಸಿಎಂ ರಾಮ ಜಪ

ಬೆಂಗಳೂರು:ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಒಂದು ರೂಪಾಯಿ ಕೊಡಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಮ ಜಪ ಮಾಡಲು ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿ ರಾಮ ಮಂದಿರ ಉದ್ಘಾಟಿಸಿದ್ದ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇಲ್ಲಿಂದ ಆರಂಭವಾದ ಸಿದ್ದರಾಮಯ್ಯ ಅವರ ಶ್ರೀರಾಮ ಜಪ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲೂ ಮುಂದುವರಿದಿದೆ.ಗಾAಧಿ ಪುಣ್ಯಸ್ಮರಣೆ ಹಿನ್ನೆಲೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಶ್ರೀರಾಮ ಚಂದ್ರರ ಆದರ್ಶವನ್ನು ಸ್ಮರಿಸಿದರು. ಮಹಾತ್ಮ ಗಾಂಧೀಜಿ ಸಾಯುವಾಗ ಹೇ ರಾಮ್ ಅಂತ […]

ಸರಕಾರಕ್ಕೆ ಸಂವಿಧಾನದ ಬಗ್ಗೆ ಗೌರವ ಇದೆಯೇ?

ಬೆಂಗಳೂರು:ಸಂವಿಧಾನ ಜಾಗೃತಿ ಸಪ್ತಾಹ ಮಾಡುತ್ತಾರೆ. ಈ ಸರಕಾರದವರು ಸಂವಿಧಾನ ಗೌರವಿಸುತ್ತಾರಾ? ಇವರಿಗೇ ಮೊದಲು ಜಾಗೃತಿ ಮೂಡಿಸಬೇಕಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದರು.ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಇವರಿಗೆ ಸಂವಿಧಾನ ಕುರಿತ ಪರಿಜ್ಞಾನ ಇಲ್ಲ. ಇವರು ಜನರ ಭಾವನೆ ಅರ್ಥ ಮಾಡಿಕೊಂಡಿಲ್ಲ. ಅಗೌರವದಿಂದ ನಡೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಕೆರೆಗೋಡಿನಲ್ಲಿ ಕಾನೂನು ಪ್ರಕಾರ ಅನುಮತಿ ಪಡೆದೇ ಧ್ವಜ ಹಾರಿಸಿದ್ದಾರೆ. ಕಾನೂನು ಪ್ರಕಾರ ತಪ್ಪಾಗಿದ್ದರೆ […]

ಮಂಡ್ಯ ಹನುಮ ಧ್ವಜ ವಿವಾದ:ಸರ್ಕಾರವೇ ನಕಲಿ ದಾಖಲೆ ಸೃಷ್ಟಿ

ಬೆಂಗಳೂರು:ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬAಧಿಸಿ ಸಚಿವ ಎನ್ ಚಲುವರಾಯಸ್ವಾಮಿ ಮಾಡಿರುವ ಆರೋಪಗಳಿಗೆ ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಧ್ವಜ ತೆರವು ವಿಚಾರವಾಗಿ ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕೆರಗೋಡಿನ ಬಸ್ ನಿಲ್ದಾಣದ ಧ್ವಜಸ್ತಂಭ ಸ್ಥಾಪನೆಗೆ ಮನವಿ ಮಾಡಿದ್ದ ಗೌರಿ ಶಂಕರ್ ಸೇವಾ ಟ್ರಸ್ಟ್, ಯಾವ ಧ್ವಜ ಅಂತ ಹೇಳಿರಲಿಲ್ಲ. ಅದಕ್ಕೆ ಅನುಮತಿ ನೀಡಲಾಗಿತ್ತು. ಈಗ ಸರ್ಕಾರವೇ ನಕಲಿ ದಾಖಲೆ ಸರ್ಕಾರ […]

ಕಾನೂನು ವಿರುದ್ಧ ಯಾರೇ ನಡೆದುಕೊಂಡರು ಕ್ರಮ

ಬೆಂಗಳೂರು:ಕಾನೂನು ವಿರುದ್ಧ ಯಾರೇ ನಡೆದುಕೊಂಡರೂ ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಮಂಡ್ಯ ಕೆರಗೋಡು ಘಟನೆಗೆ ಪೊಲೀಸರು ತೆಗೆದುಕೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.ಕೆರಗೋಡಿನಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆರಗೋಡಿನಲ್ಲಿ ಧ್ವಜ ಹಾರಿಸಲು ಅನುಮತಿ ಕೇಳಿದ್ದರು. ರಾಷ್ಟ್ರಧ್ವಜ, ನಾಡ ಧ್ವಜ ಹಾರಿಸಲು ಅನುಮತಿ ಕೇಳಿದ್ರು. ಅದಕ್ಕೆ ಅನುಮತಿ ಪಂಚಾಯತ್ ಅವರೇ ಕೊಟ್ಟಿದ್ದಾರೆ. ಪಂಚಾಯತ್ ಅವರು ಅನುಮತಿ ಕೊಡುವಾಗ ಕೆಲವು ಕಂಡೀಷನ್ ಹಾಕಿ ಕೊಟ್ಟಿದ್ದಾರೆ. ಬೇರೆ ಧ್ವಜ ಹಾಕಬಾರದು […]

ಮಂಡ್ಯ ಹನುಮ ಧ್ವಜ ವಿವಾದ:ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ಗರಂ

ಮಂಡ್ಯ:ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡಲು ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಮುಂದಾಗಿರುವುದು ನೋವು ತಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬAಧಿಸಿ ಮಂಡ್ಯದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೀವು (ಕುಮಾರಸ್ವಾಮಿ) ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದ ಕಾರಣ ಎಂಬುದನ್ನು ಮರೆಯಬೇಡಿ. ಜಿಲ್ಲೆಯ ಜನರ ಜೀವನ ಹಾಳುಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರಾಗಿ ನೀವು […]

ಪೀಣ್ಯ ಫ್ಲೈಓವರ್‌ನಲ್ಲಿ ಹೆವಿ ವೆಹಿಕಲ್ ಸಂಚಾರಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಿAದ ರಾಜ್ಯದ 22 ಜಿಲ್ಲೆಗಳು ಸೇರಿದಂತೆ ಗೋವಾ, ಮಹಾರಾಷ್ಟ್ರಕ್ಕೆ ಸಂಪರ್ಕಿಸುವ ಪೀಣ್ಯ ಫ್ಲೈಓವರ್ ಮೇಲೆ ಸಂಚರಿಸುವ ವಾಹನ ಸವಾರರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಹೆವಿ ವಾಹನಗಳ ಸಂಚಾರಕ್ಕೆ ಫ್ಲೈಓವರ್ ಫಿಟ್ ಆಗಿರುವ ಬಗ್ಗೆ ಐಐಎಸ್‌ಸಿ ತಜ್ಞರ ವರದಿ ಎನ್‌ಹೆಚ್‌ಎಐ ಕೈ ಸೇರಿದೆ.ಬೆಂಗಳೂರಿನಿAದ ರಾಜ್ಯದ ಶೇ.80ರಷ್ಟು ಜಿಲ್ಲೆಗಳಿಗೆ ಸಂಪರ್ಕಿಸುವ ಪೀಣ್ಯ ಫ್ಲೈಓವರ್‌ಗೆ ಹಿಡಿದಿದ್ದ ಗ್ರಹಣ ದೂರಾಗುವ ಸಂದರ್ಭ ಬಂದಿದೆ. ಇದೇ ಫೆಬ್ರವರಿ ಮೊದಲ ವಾರದಿಂದಲೇ ಹೆವಿ ವೆಹಿಕಲ್ ಓಡಾಟಕ್ಕೆ ಸಂಚಾರ ಮುಕ್ತವಾಗುವ ಸಾಧ್ಯತೆ ಇದೆ. ಫ್ಲೈಓವರ್ ಲೋಡ್ […]

ಹಲವು ಕ್ಷೇತ್ರಗಳಲ್ಲಿ ಹೊಸಬರಿಗೆ ಟಿಕೆಟ್ ಫಿಕ್ಸ್

ಬೆಂಗಳೂರು:ಈ ಬಾರಿಯೂ 25 ಅಥವಾ ಅಧಿಕ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯನ್ನು ಹೊಂದಿರುವ ರಾಜ್ಯ ಬಿಜೆಪಿ ಎರಡು ಸಮೀಕ್ಷೆಗಳನ್ನು ನಡೆಸಿದೆ. ಎರಡೂ ಸರ್ವೇ ಆಧಾರದ ಮೇಲೆ ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಈ ಪೈಕಿ 10 ರಿಂದ 15 ಕ್ಷೇತ್ರಗಳಲ್ಲಿ ಹೊಸಬರಿಗೆ ಟಿಕೆಟ್ ನೀಡೋದು ಬಹುತೇಕ ಖಚಿತ ಎಂಬ ಸುದ್ದಿ ಹರಿದಾಡುತ್ತಿದೆ. ಇನ್ನುಳಿದ ಕ್ಷೇತ್ರದ ಬಗ್ಗೆ ಅಂತಿಮವಾಗಬೇಕಿದೆ. 13 ಕ್ಷೇತ್ರಗಳಿಗಾಗಿ ಕೊನೆಯ ಸಮೀಕ್ಷೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.ಲೋಕಸಭಾ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ […]