September 16, 2026

ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿಗೆ ಶ್ರಮಿಸುತ್ತೇವೆ

ಕಲಬುರಗಿ:ಇಂಡಿಯಾ ಮೈತ್ರಿಕೂಟ ಒಟ್ಟಾಗಿರಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮೈತ್ರಿಕೂಟವು ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇನೆ. ಹೀಗಾಗಿ ಇನ್ನು ಆ ವಿಚಾರದ ಬಗ್ಗೆ ಈಗ ಹೇಳಿಕೆ ಕೊಟ್ಟರೆ ಗೊಂದಲ ಆಗುತ್ತದೆ ಎಂದರು.ಡೆಹ್ರಾಡೂನ್‌ಗೆ ಹೋಗಿ ಮಾಹಿತಿ ಪಡೆದುಕೊಂಡು ನಂತರ ಮಾತನಾಡುತ್ತೇನೆ. ಇಂಡಿಯಾ ಒಕ್ಕೂಟದಿಂದ ಎಲ್ಲರೂ ಸ್ಪರ್ಧೆ ಮಾಡಿದರೆ ಒಳ್ಳೆಯದಾಗಲಿದೆ ಎಂದು ಅವರು […]

ಗ್ಯಾರೆಂಟಿ ಯೋಜನೆ ಅನುಷ್ಠಾನಕ್ಕೆಸರ್ಕಾರದಿಂದ ಪ್ರಾಧಿಕಾರ, ಸಮಿತಿ ರಚನೆ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಈ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸರ್ಕಾರ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರ ಹಾಗೂ ತಾಲೂಕು ಮತ್ತು ಬಿಬಿಎಂಪಿ ಮಟ್ಟದಲ್ಲಿ ಅನುಷ್ಠಾನ ಸಮಿತಿ ರಚಿಸಲು ನಿರ್ಧರಿಸಿದೆ. ಈ ಸಂಬAಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಮೇಲ್ವಿಚಾರಣೆಗೆ ರಾಜ್ಯ ಮಟ್ಟದ ಕಾರ್ಯವ್ಯವಸ್ಥೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮತ್ತು ಗ್ಯಾರಂಟಿ ಯೋಜನೆಗಳ […]

ಶೃಂಗೇರಿ ಮಠದ ಗುತ್ತಿಗೆದಾರನ ವಿರುದ್ಧ ಎಫ್‌ಐಆರ್

ಚಿಕ್ಕಮಗಳೂರು:ಶೃಂಗೇರಿ ಮಠದಿಂದ ನಿರ್ಮಾಣವಾಗುತ್ತಿರುವ ಕಾಮಗಾರಿಗಾಗಿ ಅರಣ್ಯ ನಾಶಪಡಿಸಿರುವ ಆರೋಪದ ಮೇಲೆ ಶೃಂಗೇರಿ ಮಠದ ಗುತ್ತಿಗೆದಾರ ಸಂದೀಪ್ ವಿರುದ್ಧ ಈIಖ ದಾಖಲಾಗಿದೆ. ಶೃಂಗೇರಿ ಮಠದಿಂದ ಗುಡ್ಡದ ಮೇಲೆ ಶಂಕರಾಚಾರ್ಯರ ಪ್ರತಿಮೆ ಬಳಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಸಂದೀಪ್ ಅವರು ಗುಡ್ಡ ನಾಶ, ಮರಗಳ ಕಡಿತ ಹಿನ್ನೆಲೆ ಶೃಂಗೇರಿ ವಲಯ ಅರಣ್ಯ ಇಲಾಖೆಯ ಕಚೇರಿಯಲ್ಲಿ ಎಫ್‌ಐಆರ್ ದಾಖಲಾಗಿದೆ.ಶೃಂಗೇರಿ ಮಠದಿಂದ ನಿರ್ಮಾಣವಾಗಿರುವ ಶಂಕರಾಚಾರ್ಯರ ಪ್ರತಿಮೆ ಬಳಿ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಕೆಳ ಭಾಗದಲ್ಲಿ ಮಣ್ಣು ಕುಸಿತ ಹಿನ್ನೆಲೆ ಮರಗಳ […]

ಸಕ್ಕರೆ ಕಾರ್ಖಾನೆ ನೋಟಿಸ್: ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ

ಕಲಬುರಗಿ:ಪರಿಸರ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ. ಈ ಸಂಬAಧ ಎಕ್ಸ್ (ಟ್ವಿಟರ್)ನಲ್ಲಿ ಟ್ವೀಟ್ ಮಾಡುವ ಮೂಲಕ ಯತ್ನಾಳ್ ಸರ್ಕಾರದ ನಡೆಯನ್ನು ವಿರೋಧಿಸಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗೂ ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ […]

ಮತ್ತೆ ಬಿಜೆಪಿಗೆ ಸೇರುತ್ತಾರಾ ಜನಾರ್ದನ ರೆಡ್ಡಿ?

ಬೆಂಗಳೂರು:ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಮರು ಸೇರ್ಪಡೆಗೊಳಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಕೊಪ್ಪಳ ಜಿಲ್ಲೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರನ್ನು ಸಂಪರ್ಕಿಸಿದ್ದಾರೆ. ಮತ್ತೆ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕರೂ ಆಗಿರುವ ಶಾಸಕ ಜನಾರ್ದನ ರೆಡ್ಡಿ ಬಳಿ ಅವರ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡುವಂತೆ ಕೋರಲಾಗಿದೆ. ಬಳಿಕ ಕೊಪ್ಪಳ ಕ್ಷೇತ್ರದಿಂದ ಜನಾರ್ದನ ರೆಡ್ಡಿಯನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.ವಿಲೀನದ ಬಗ್ಗೆ ಜನಾರ್ದನ […]

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲಾ

ಕೊಪ್ಪಳ: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳ ನಗರದಲ್ಲಿ ಮಾತನಾಡಿದ ಅವರು ‘ಆರು ಕೋಟಿ ತೊಂಬತ್ತು ಲಕ್ಷ ಜನರಿಗೆ ಬರೊಬ್ಬರಿ ಒಂದು ಲಕ್ಷ ಕೋಟಿ ಹಣ ನೀಡುತ್ತಿದ್ದೇವೆ. 7.10 ಲಕ್ಷ ನೌಕರರಿಗೆ ಸರಿಸುಮಾರು 96 ಲಕ್ಷ ಕೋಟಿ ಹಣ ನೀಡಲಾಗುತ್ತದೆ. ಹೀಗಿರುವಾಗ ಜನರಿಗೆ ಗ್ಯಾರಂಟಿ ಯೋಜನೆ ನೀಡುವುದು ತಪ್ಪಲ್ಲ ಎಂದರು. ನಾವು ಗ್ಯಾರಂಟಿ ಬಂದ್ ಮಾಡಿದ್ರೆ ಜನ ಸುಮ್ಮನಿರುತ್ತಾರಾ? ಇನ್ನು ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋದಿಲ್ಲ, ಮುಂದುವರಿಸುತ್ತೇವೆ. […]

ನಿಗಮ ಮಂಡಳಿ ನೇಮಕ ಜಟಾಪಟಿ; ಕೋಳಿಯನ್ನು ಕೇಳಿ ಕೊಯ್ಯುಲು ಆಗುತ್ತಾ ಎಂದು ಪರಮೇಶ್ವರ್​ಗೆ ಟಾಂಗ್ ಕೊಟ್ಟ ವೆಂಕಟೇಶ್

ಚಾಮರಾಜನಗರ: ನಿಗಮ ಮಂಡಳಿ ನೇಮಕ ಮಾಡುವಾಗ ಎಲ್ಲರನ್ನು ಕೇಳಿ ಮಾಡಲು ಆಗುತ್ತಾ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು. ನಿಗಮ ಮಂಡಳಿ ನೇಮಕ ವಿಚಾರವಾಗಿ ನನ್ನನ್ನು ಯಾರು ವಿಚಾರಿಸಿಲ್ಲ, ಯಾರು ಏನು ಕೂಡ ಕೇಳಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್  ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ವೆಂಕಟೇಶ್, ನಾವು ಕೋಳಿ ಕೊಯ್ಯುವಾಗ ಕೇಳಲು ಆಗುತ್ತಾ ಎಂದು ನಗು ನಗುತ್ತಲೇ ಟಾಂಗ್ ಕೊಟ್ಟರು. ಅಯೋದ್ಯೆಯಲ್ಲಿ ರಾಮಲಲ್ಲ ಪ್ರತಿಷ್ಠಾಪನೆಯು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಲಾಭವಾಗಲಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವೆಂಕಟೇಶ್, ನಾವು ರಾಜಕಾರಣಿಗಳು. […]

ಮಾಣಿಕ್ ಷಾ ಗ್ರೌಂಡ್‌ನಲ್ಲಿ ಭದ್ರತಾ ಲೋಪ

ಬೆಂಗಳೂರು:ಅಳಿಯನ ಕೆಪಿಎಸ್‌ಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ನ್ಯಾಯ ಕೇಳಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮೈಸೂರು ಮೂಲದ ಪರಶುರಾಮ್ ವಶಕ್ಕೆ ಪಡೆದ ವ್ಯಕ್ತಿ. ಸಿಎಂ ಸಿದ್ದರಾಮಯ್ಯ ಹಾಗೂ ಗೌವರ್ನರ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುತ್ತಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದರು. ಈ ವೇಳೆ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಕಬ್ಬನ್ ಪಾರ್ಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.ನಡೆದಿದ್ದೇನು..?: ಗಣರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ […]

ಶೆಟ್ಟರ್ ಕಾಂಗ್ರೆಸ್ ಬಿಟ್ಟಿರುವುದು ದಿಗ್ಭ್ರಮೆ ತಂದಿದೆ, ಶೆಟ್ಟರ್

ಉಡುಪಿ:ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ತೊರೆದು ಮತ್ತೆ ಬಿಜೆಪಿಗೆ ಮರಳಿದ್ದಾರೆ. ಈ ಸಂಬAಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು ಶೆಟ್ಟರ್ ಕಾಂಗ್ರೆಸ್ ಬಿಟ್ಟಿರುವುದು ನನಗೆ ದಿಗ್ಭ್ರಮೆ ತಂದಿದೆ. ಶೆಟ್ಟರ್ ಕಾಂಗ್ರೆಸ್ ಗೆ ಬಂದದ್ದು ಯಾಕೆ? ಹೋದದ್ದು ಯಾಕೆ? ರಾಜಕೀಯದಲ್ಲಿ ಈ ರೀತಿ ಆಗಬಾರದು ಎಂದು ಹೇಳಿದರು.ಬಿಜೆಪಿಯಲ್ಲಿ ಅವಮಾನ ಆಯ್ತು ಅಂತ ಶೆಟ್ಟರ್ ಕಾಂಗ್ರೆಸ್ ಗೆ ಬಂದ್ರು. ಅವರಾಗಿಯೇ ಬಂದರೂ ನಾವು ಅವರನ್ನು ಸ್ವಾಗತ ಮಾಡಿದೆವು. ಟಿಕೆಟ್ […]

ಸ್ವಂತ ಮನೆಯಿಂದ ಹೊರಗೆ ಹಾಕಿದಾಗ ಯಾಕೆ ಬಂದ್ರಿ?

ವಿಜಯಪುರ:ಸ್ವಂತ ಮನೆಯಿಂದ ಹೊರಗೆ ಹಾಕಿದಾಗ ನಿಮಗೆ ಅನ್ಯಾಯ, ಅಪಮಾನ ಆದಾಗ ಯಾಕೆ ಬಿಟ್ಟು ಬಂದ್ರಿ? ಇದನ್ನು ನಾನು ಹೇಳಬೇಕಿಲ್ಲ, ಅವರೇ ಬಿಜೆಪಿಯಿಂದ ಅನ್ಯಾಯ, ಅಪಮಾನ ಆಗಿದೆ ಅಂದಿದ್ರು. ಮೊನ್ನೆಯವರಿಗೆ ಬಿಜೆಪಿ ಅನ್ಯಾಯದ ಬಗ್ಗೆ ಹೇಳುತ್ತಾ ಬಂದಿದ್ರು ಎಂದು ಸಚಿವ ಎಂ.ಬಿ ಪಾಟೀಲ್ ಕಿಡಿಕಾರಿದರು.ಬಿಜೆಪಿ ಸ್ವಂತ ಮನೆಗೆ ಮರಳಿದೆ ಎಂದು ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಆಗಿದ್ದವರಿಗೆ ಬಿಜೆಪಿ ಒಂದು ಎಂಎಲ್‌ಎ ಟಿಕೆಟ್ ಕೊಡಲಿಲ್ಲ. ನನ್ನ ಮಂತ್ರಿ ಮಾಡಬೇಡಿ ಎಂಎಲ್‌ಎ ಟಿಕೆಟ್ ಕೊಡಿ ಅಂದಿದ್ರು. ಎಂಎಲ್‌ಎ […]