September 17, 2026

ಶೆಟ್ಟರ್, ಜೋಶಿ ಒಂದು ನಾಣ್ಯದ ಎರಡು ಮುಖ

ಬೆಂಗಳೂರು:ವಿಶೇಷವಾಗಿ ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ ಒಂದು ನಾಣ್ಯದ ಎರಡು ಮುಖದ ರೀತಿ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ಸೋಮಣ್ಣ ಹಾಡಿ ಹೊಗಳಿದ್ದಾರೆ.ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾದ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನವನ್ನು ಸ್ವಾಗತ ಮಾಡುತ್ತೇನೆ. ಶೆಟ್ಟರ್ ಅವರು ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳು. ತೀರ್ಮಾನ ಮಾಡುವಾಗ ಒಂದೊAದು ಸಾರಿ ಎಷ್ಟರ ಮಟ್ಟಿಗೆ ಅನ್ನೋದಕ್ಕಿಂತ, ಅವರ ಹಿರಿಯ ಅನುಭವ ಇಟ್ಟುಕೊಂಡು ಅಮಿತ್ ಶಾ, ನಡ್ಡಾಜೀ ಅವರು ಪ್ರಧಾನಿಗಳ ಸಲಹೆ […]

ಮೋದಿ ಆರ್‌ಎಸ್‌ಎಸ್‌ನ ಕೈಗೊಂಬೆ

ಬೆAಗಳೂರು:ಮೋದಿಯವರು ಆರ್‌ಎಸ್‌ಎಸ್‌ನ ಕೈಗೊಂಬೆಯಾಗಿ ನಡೆದುಕೊಂಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರೆವೇರಿಸಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿಕೆಶಿ ಉಪಸ್ಥಿತಿಯಲ್ಲಿ ಮಾತನಾಡಿದ ಅವರು, ಜನವರಿ 26 ನಮ್ಮ ಜೀವನದಲ್ಲಿ ಹಾಗೂ ಭಾರತದ ಇತಿಹಾಸದಲ್ಲಿ ವಿಶೇಷ ದಿನ. ಈ ದೇಶದ ಸಂವಿಧಾನ ಅಸ್ತಿತ್ವದಲ್ಲಿ ಇಲ್ಲದೇ ಹೋಗಿದ್ದರೆ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಆಗುತ್ತಿರಲಿಲ್ಲ. ಇಷ್ಟೊಂದು ಪ್ರಯತ್ನ ಮಾಡಿ ಸ್ವಾತಂತ್ರö್ಯಕ್ಕೆ ಹೋರಾಟ ಮಾಡಿ ಸಂವಿಧಾನ ರಚಿಸಿದರು. ದೇಶದ ಸಂವಿಧಾನದಲ್ಲಿ ಇರುವ ಪ್ರಮುಖ […]

ಜಗದೀಶ್ ಶೆಟ್ಟರ್ ಹೋಗಿದ್ದೇ ಒಳ್ಳೆಯದು

ಬೆಂಗಳೂರು:ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ. ನೂರಾರು ಜನ ಬರ್ತಾರೆ, ನೂರಾರು ಜನ ಹೋಗುತ್ತಾರೆ. ಜಗದೀಶ್ ಶೆಟ್ಟರ್ ಅವರು ಇದನ್ನು ಗಮನದಲ್ಲಿಟ್ಟುಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾದ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ತೀವ್ರ ವಾಗ್ದಾಳಿ ನಡೆಸಿದರು. ನೀತಿ, ಸಿದ್ಧಾಂತದಡಿ ರಾಜಕೀಯ ಮಾಡುವವರು ನಾವು. ಅಲ್ಪಸಂಖ್ಯಾತ ಸಮುದಾಯ ಶೆಟ್ಟರ್‌ರನ್ನ ಒಪ್ಪಿರಲಿಲ್ಲ. ಇದರಿಂದ ನಮ್ಮ ಪಕ್ಷ ಸಂಘಟನೆಗೂ ಕಷ್ಟ ಆಗುತ್ತಿತ್ತು. ಶೆಟ್ಟರ್ ಹೋಗಿದ್ದೇ ಒಳ್ಳೆಯದು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ […]

ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ಕಾರ ಸರ್ವ ಸನ್ನದ್ಧ

ಬೆಂಗಳೂರು:ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ನಮ್ಮ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗಣರಾಜ್ಯೋತ್ಸವದ ಸಂದರ್ಭ ನೀಡಿದ ಸಂದೇಶದಲ್ಲಿ ಅವರು, ಕೋಮುವಾದ ಆಂತಕ ಸೃಷ್ಟಿಸುತ್ತಿದೆ. ನಮ್ಮ ನಡೆ ಅಭಿವೃದ್ಧಿಯ ಕಡೆಗೆ ಸಾಗುತ್ತಿದ್ದರೂ ನಮ್ಮ ಕನಸಿನ ಭಾರತದ ಗುರಿಯನ್ನು ತಲುಪಲು ಸಾಧ್ಯವಾಗಿಲ್ಲ ಎನ್ನುವುದನ್ನು ವಿಷಾದದಿಂದಲೇ ಒಪ್ಪಬೇಕಾಗಿದೆ. ಅಭಿವೃದ್ಧಿಯ ದಾರಿಯಲ್ಲಿ ಹೊಸ ಸವಾಲುಗಳು ಎದುರಾಗಿವೆ ಎಂದು ಹೇಳಿದರು.ಮುಖ್ಯವಾಗಿ ಇತ್ತೀಚೆಗೆ ಹೆಡೆ ಎತ್ತಿರುವ ಕೋಮುವಾದ, ನಮ್ಮ ಜಾತ್ಯತೀತ ಸಮಾಜಕ್ಕೆ ಅಪಾಯವನ್ನುಂಟು ಮಾಡುವ ಆತಂಕವನ್ನು ಅನುಭವಿಸುತ್ತಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕನ್ನಡಿಗರು […]

ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ: ಶಿಲ್ಪಿ ಅರುಣ್ ಯೋಗಿರಾಜ್

ಮೈಸೂರು:ನನಗೆ ರಾಜಕೀಯ ಆಸಕ್ತಿ ಇಲ್ಲ. ಕಲಾ ಸೇವೆಯಲ್ಲಿ ಮುಂದುವರಿಯುತ್ತೇನೆ ಎಂದು ಅಯೋಧ್ಯೆ ರಾಮಮಂದಿರ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿರುವ ಶಿಲ್ಪಿ ಅರುಣ್ ಯೋಗಿರಾಜ್ ಹೇಳಿದ್ದಾರೆ.ತವರು ನೆಲ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕೆಲಸವನ್ನ ನಾನು ಶ್ರದ್ಧೆಯಿಂದ ಮಾಡಿದ್ದೇನೆ. ನನಗೆ ಇಷ್ಟೊಂದು ಪ್ರೀತಿ, ಅದ್ದೂರಿ ಸ್ವಾಗತ ಸಿಗುತ್ತೆ ಅಂತಾ ಅಂದುಕೊAಡಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.ಯುವಕರು ಕುಲಕಸುಬು ನಂಬಿದರೆ ಒಳ್ಳೆಯ ಜೀವನ ರೂಪಿಸಿಕೊಳ್ಳಬಹುದು. ಅದಕ್ಕೆ ನಾನೇ ಉದಾಹರಣೆ. ರಾಜಕೀಯದ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ರಾಜಕೀಯಕ್ಕೆ […]

ಬೆಂಗಳೂರಿನಲ್ಲಿ ಮಗನಿಗೆ ಗುಂಡಿಟ್ಟು ಹತ್ಯೆಗೈದ ತಂದೆ!

ಬೆAಗಳೂರು:ತಂದೆಯೇ ಮಗನನ್ನು ಗುಂಡು ಹಾರಿಸಿ ಕೊಲೆಗೈದ ದಾರುಣ ಘಟನೆ ಬೆಂಗಳೂರಿನ ಕರೆಕಲ್‌ನಲ್ಲಿ ನಡೆದಿದೆ.ನರ್ತನ್ ಬೋಪಣ್ಣ (32) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಅವರ ತಂದೆ ಸುರೇಶ್ ವಿನಾಕಾರಣ ಬಂದೂಕಿನಿAದ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಗುಂಡೇಟಿನಿAದ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದ ಅವರನ್ನು ಕೂಡಲೇ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವಿಗೀಡಾಗಿದ್ದಾರೆ.ನರ್ತನ್ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆ ಬಳಿಕ ಸ್ಥಳೀಯರ ಮಾಹಿತಿ […]

ನುಡಿದಂತೆ ನಡೆದಿರುವ ಸರ್ಕಾರ ೫ ಗ್ಯಾರಂಟಿ ಯಶಸ್ವಿಯಾಗಿ ಜಾರಿ ಮಾಡಿದೆ

ಬೆಂಗಳೂರು:ಸರ್ಕಾರ ನುಡಿದಂತೆ ನಡೆದಿದೆ. 5 ಗ್ಯಾರಂಟಿ ಯಶಸ್ವಿಯಾಗಿ ಜಾರಿ ಮಾಡಿದೆ. ಶಕ್ತಿ ಯೋಜನೆಯಲ್ಲಿ 134.34 ಕೋಟಿ ಜನ ಉಚಿತ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆ ಅಡಿ 2900.12 ಕೋಟಿ ಹಣ ಫಲಾನುಭವಿಗಳಿಗೆ ವರ್ಗಾವಣೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆ ಅಡಿ 1.50 ಕೋಟಿ ಗ್ರಾಹಕರು ಯೋಜನೆ ಫಲ ಪಡೆಯುತ್ತಿದ್ದಾರೆ. 700 ಕೋಟಿ ಗೃಹಜ್ಯೋತಿಗಾಗಿ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.ಗಣರಾಜ್ಯೋತ್ಸವ ಅಂಗವಾಗಿ ನಗರ ಮಾಣಿಕ್ ಶಾ ಗ್ರೌಂಡ್‌ನಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮೊದಲು […]

ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ಗೌರವ

ನವದೆಹಲಿ: 75ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಮಡಿದ ವೀರರಿಗೆ ಗೌರವ ಸಲ್ಲಿಸಿದರು. ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನು ವೀಕ್ಷಿಸಲು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.  ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಅವರ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಆಗಮಿಸಿದ ವೇಳೆ ರಾಷ್ಟ್ರಪತಿಗಳ ಅಂಗರಕ್ಷಕರು ಬೆಂಗಾವಲು […]

ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರ ದುರ್ಮರಣ!

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ ಅನಗವಾಡಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕಾರು ಚಾಲಕನನ್ನು ಮಲ್ಲು ಪೂಜಾರಿ ಎಂದು ಗುರುತಿಸಲಾಗಿದೆ. […]

ನನ್ನ ನಿಲುವು ಸ್ಪಷ್ಟ, ನಾನು ಬಿಜೆಪಿಗೆ ಹೋಗಲ್ಲ

ಬೆಂಗಳೂರು:ನನ್ನ ನಿಲುವು ಸ್ಪಷ್ಟ. ನಾನು ಬಿಜೆಪಿಗೆ ಹೋಗಲ್ಲ ಎಂದು ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.ಜಗದೀಶ್ ಶೆಟ್ಟರ್ ಬೆನ್ನಲ್ಲೇ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು, ಅವರು ಒಟ್ಟಿಗೆ ನಿರ್ಧಾರ ಮಾಡಿರಲಿಲ್ಲ. ನಾನು ಮೊದಲು ಕಾಂಗ್ರೆಸ್‌ಗೆ ಬಂದೆ. ಟಿಕೆಟ್ ಸಿಗದ ಕಾರಣ ಅವರು ನಂತರ ಬಂದರು. ಯಾಕೆ ಹೋಗಿದ್ದಾರೆ ಅಂತ ಗೊತ್ತಿಲ್ಲ, ಅವರನ್ನೇ ಕೇಳಬೇಕು. ನನ್ನನ್ನ ಬಿಜೆಪಿ ಸಂಪರ್ಕ ಮಾಡಿಲ್ಲ, ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಲೋಕಸಭೆ ಅಗತ್ಯ, ಅನಿವಾರ್ಯ ಇದೆ. ಹಾಗಾಗಿ ಎಲ್ಲರನ್ನ […]