ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಜೊತೆಗಿನ ಕಾಂಗ್ರೆಸ್ ಶಾಸಕನ ಫೋಟೋ ವೈರಲ್
ಕಲಬುರಗಿ: ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ್ದ ಪ್ರಕರಣ ಸಂಬಂಧ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದು ಕಾಂಗ್ರೆಸ್ ಕಾರ್ಯಕರ್ತನಾ? ಎಂಬ ಪ್ರಶ್ನೆ ಎದ್ದಿದೆ. ಆರೋಪಿ ಸಂಗಮೇಶ, ಶಾಸಕ ಅಲ್ಲಮಪ್ರಭು ಪಾಟೀಲ್ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಲಬುರಗಿ ನಗರದ ಹೊರವಲಯದ ಕೊಟನೂರು ಡಿ ಗ್ರಾಮದ ಬಳಿ ಡಾ. ಬಿಆರ್ ಅಂಬೇಡ್ಕರ್ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. 26 ವರ್ಷದ ಕಿರಣ್, 25 ವರ್ಷದ ಹನುಮಂತ, […]







































































































































































































































































































































































































































































































































































































































































































































































































































































































































































































































































































































