September 16, 2026

ಜೈ ಶ್ರೀರಾಮ್ ಬಿಜೆಪಿ ಆಸ್ತಿಯಲ್ಲ

ಮೈಸೂರು:ನಾವೂ ಶ್ರೀರಾಮನ ಭಕ್ತರೇ, ಜೈ ಶ್ರೀರಾಮ್ ಬಿಜೆಪಿ ಆಸ್ತಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ನಾವೂ ಶ್ರೀರಾಮನ ಘೋಷಣೆ ಕೂಗುತ್ತೇವೆ. ನನ್ನ ಹೆಸರಲ್ಲೇ ರಾಮ ಇದ್ದಾನೆ. ತಂದೆ ಹೆಸರಲ್ಲೂ ರಾಮ ಇದ್ದಾನೆ. ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಹೇಳುವಂತೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ ಮನವಿ ಮಾಡಿದ್ದೆ. ಜಾತ್ಯತೀತ ಪಕ್ಷವು ಕೋಮುವಾದಿ ಪಕ್ಷದ ಜೊತೆ ಕೈಜೋಡಿಸಿದೆ. ಅಧಿಕಾರಕ್ಕೆ ಬಂದು […]

ಫೆ 1ರಿಂದ ಕೊಬ್ಬರಿ ಖರೀದಿ:ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕ್ರಮ

ತುಮಕೂರು:ಫೆಬ್ರವರಿ 1ರಿಂದ ಕೊಬ್ಬರಿ ಖರೀದಿ ಮಾಡಲು ಅವಕಾಶ ನೀಡಲಾಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಬಯೋಮೆಟ್ರಿಕ್ ಆಧಾರದ ಮೇಲೆ ಕೊಬ್ಬರಿ ಖರೀದಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.ನಗರದಲ್ಲಿ ಆಯೋಜಿಸಿದ್ದ ಕೊಬ್ಬರಿ ಉಂಡೆ ಖರೀದಿ ಕೇಂದ್ರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾ.ಪಂ.ಕಚೇರಿಗಳಲ್ಲಿ ಕರಪತ್ರ ಅಂಟಿಸಿ ರೈತರಿಗೆ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಹೆಚ್ಚು ಉಂಡೆ ಕೊಬ್ಬರಿ ಖರೀದಿ ಮಾಡಲಿದೆ. ರೈತರ ಜೊತೆ ಕೇಂದ್ರ ಸರ್ಕಾರ ಇದೆ […]

ಶಿಕ್ಷಕಿ ಕೊಲೆಯಾದ ೩೦ ಗಂಟೆಯೊಳಗೆ ಆರೋಪಿ ಅರೆಸ್ಟ್

ಮಂಡ್ಯ:ಜಿಲ್ಲೆಯ ಮೇಲುಕೋಟೆಯಲ್ಲಿ ನಡೆದ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ ಸಂಬAಧ ಹತ್ಯೆಯಾದ ೩೦ ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಿತೀಶ್ (21) ಬಂಧಿತ ಆರೋಪಿಯಾಗಿದ್ದಾನೆ. ಡಿವೈಎಸ್‌ಪಿ ಮುರಳಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.ತನಿಖೆ ವಿಚಾರಣೆ ವೇಳೆ ದೀಪಿಕಾರನ್ನು ಪ್ಲ್ಯಾನ್ ಮಾಡಿಯೇ ಕೊಲೆ ಮಾಡಿರುವುದು ತಿಳಿದುಬಂದಿದೆ. ಕೊಲೆಗೂ ಮುನ್ನ ನಿತೀಶ್ ಗುಂಡಿ ತೆಗೆದಿದ್ದನು. ನಂತರ ದೀಪಿಕಾರನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿ ಹೂತು ಹಾಕಿದ್ದನು ಎಂದು ತಿಳಿದುಬಂದಿದೆ.ಹೊಸಪೇಟೆಯಲ್ಲಿ ಆರೋಪಿ ಪತ್ತೆದೀಪಿಕಾರನ್ನು ಕೊಲೆಗೈದ ನಂತರ ಎರಡು ದಿನಗಳ […]

ಜಾತ್ರೆ ವೇಳೆ ಕುಡಿದು ರಂಪಾಟಮೂವರಿಗೆ ಸ್ಟೀಲ್ ಕಟರ್‌ನಿಂದ ಇರಿತ

ಚಿತ್ರದುರ್ಗ:ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂವರ ಮೇಲೆ ಸ್ಟೀಲ್ ಕಟರ್‌ನಿಂದ ಹಲ್ಲೆ ನಡೆಸಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.ಗ್ರಾಮದಲ್ಲಿ ಉಡುಸಲಮ್ಮ ದೇವಿಯ ಜಾತ್ರೆ ನಡೆಯುತ್ತಿತ್ತು. ಈ ವೇಳೆ ಬೇರೆ ಬೇರೆ ಕಡೆಯಿಂದ ಗ್ರಾಮಕ್ಕೆ ಜನ ಬಂದಿದ್ದರು. ಇದೇ ವೇಳೆ ವಿರೇಶ್ ಎಂಬಾತ ಕುಡಿದು ಗಲಾಟೆ ಆರಂಭಿಸಿದ್ದಾನೆ. ಬಳಿಕ ದೇವಾಲಯದ ಬಳಿ ಇದ್ದ ಮೂವರು ಅದೇ ಗ್ರಾಮದ ಯುವಕರಿಗೆ ಸ್ಟೀಲ್ ಇರಿದಿದ್ದಾನೆ.ಗ್ರಾಮದ ಪವನ್, ಮಾರುತಿ ಹಾಗೂ ಮಂಜುನಾಥ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. […]

ರಾಜಕೀಯದ ಕಡೆ ಆಸಕ್ತಿ ಇಲ್ಲ: ಡಾ. ಮಂಜುನಾಥ್

ಬೆಂಗಳೂರು:ಈ ತಿಂಗಳು ನನ್ನ ನಿರ್ದೇಶಕ ಅವಧಿ ಮುಕ್ತಾಯವಾಗುತ್ತೆ. 16 ವರ್ಷಗಳಿಂದ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ನನ್ನ ಮೊದಲ ಆಯ್ಕೆ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವುದು. ನನಗೆ ರಾಜಕೀಯ ಕ್ಷೇತ್ರದ ಬಗ್ಗೆ ಯಾವುದೇ ಆಸಕ್ತಿ ಇಲ್ಲ. ನಾನು ಯಾವುದೇ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಜಯದೇವ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಮೊದಲ ಆಯ್ಕೆ ವೈದ್ಯಕೀಯ ಸೇವೆ ಎಂದು ಸ್ಪಷ್ಟಪಡಿಸಿದರು.ಶೇ.500 ರಷ್ಟು ಅಭಿವೃದ್ಧಿ ನನ್ನ ಅವಧಿಯಲ್ಲಿಯೇ ಆಗಿದೆ. […]

ಅಂಗನವಾಡಿಗಳಿಗೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದ ರಾಜ್ಯ ಸರ್ಕಾರ

ರಾಯಚೂರು:ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ 2856 ಅಂಗನವಾಡಿ ಕೇಂದ್ರಗಳ ಪೈಕಿ ಒಟ್ಟು 808 ಬಾಡಿಗೆ ಕಟ್ಟಡಗಳ ಕೋಟ್ಯಂತರ ರೂಪಾಯಿ ಬಾಡಿಗೆಯನ್ನು ಬಿಡುಗಡೆ ಮಾಡದೆ ರಾಜ್ಯ ಸರ್ಕಾರ ಬಾಕಿ ಉಳಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.“ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲೂ ಯೋಗ್ಯತೆ ಇಲ್ಲದ ಕಾಂಗ್ರೆಸ್ […]

ಮಲ್ಲಿಕಾರ್ಜುನ್ ಖರ್ಗೆ ಆಪ್ತ ಬಿಜೆಪಿ ಸೇರ್ಪಡೆ

ಬೆಂಗಳೂರು:ಲೋಕಸಭೆ ಚುನಾವಣೆಗೆ ದೇಶದಲ್ಲಿ ಅಖಾಡ ಸಿದ್ದವಾಗುತ್ತಿದೆ. ಈ ಬಾರಿ ಶತಾಯಗತಾಯ ಬಿಜೆಪಿಯನ್ನು ಹಣಿಯಲು ವಿರೋಧ ಪಕ್ಷಗಳು ಒಂದಾಗಿ ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿವೆ. ಈ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಆಯ್ಕೆ ಮಾಡಲಾಗಿದೆ. ಆದರೆ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ತವರು ಕ್ಷೇತ್ರದಲ್ಲೇ ಬಿಗ್ ಶಾಕ್ ನೀಡಲಾಗಿದೆ. ಅದು ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.ಹೌದು ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಅವರು ಬಿಜೆಪಿ ಬಾವುಟ ಹಿಡಿದು […]

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಅಂತ ಗೃಹ ಸಚಿವ ಪರಮೇಶ್ವರ್ ವ್ಯಕ್ತಪಡಿಸಿದ್ದಾರೆ.ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಹೋದ್ರೆ ಸಚಿವರಾಗಿ ಮುಂದುವದ ನೈತಿಕತೆ ಇಲ್ಲ ಎಂಬ ಸಚಿವ ರಾಜಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ಹೆಚ್ಚು ಸ್ಥಾನ ಗೆಲ್ತೀವಿ ಅನ್ನೋ ವಿಶ್ವಾಸ ಇದೆ. ೨೮ಕ್ಕೆ ೨೮ ಗೆಲ್ಲೋಕೆ ಹೊರಟಿದ್ದೇವೆ. ಹಿಂದೆ ೨೭ ಸ್ಥಾನ ಕಾಂಗ್ರೆಸ್ ಗೆದ್ದಿರೋದನ್ನ ನೆನಪು ಮಾಡಿಕೊಳ್ಳಬೇಕು ಎಂದರು.ಸದ್ಯದ ವಾತಾವರಣ ಚೆನ್ನಾಗಿ ಇದೆ. ನಾವು ಗ್ಯಾರಂಟಿಗಳನ್ನ ಕೊಟ್ಟಿದ್ದೇವೆ. ಜನಪರ ಸರ್ಕಾರ […]

ಮತ್ತೊಬ್ಬ ಬಿಜೆಪಿ ನಾಯಕ ದೆಹಲಿಗೆ ಲೋಕಸಭೆ ಟಿಕೆಟ್‌ಗೆ ಸುಧಾಕರ್ ಕಸರತ್ತು?

ನವದೆಹಲಿ:ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ಮಾಜಿ ಸಚಿವ ಡಾ. ಕೆ.ಸುಧಾಕರ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.ಸುಧಾಕರ್ ಅವರು ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿ.ಎಲ್.ಸಂತೋಷ್ ಜೊತೆಗಿರುವ ಫೋಟೋ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್‌ಗೆ ಸುಧಾಕರ್ ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ.ಸುಧಾಕರ್ ಅವರು ಕಳೆದ […]

ಬಗೆಹರಿಯುತ್ತಿಲ್ಲ ನಿಗಮ ಮಂಡಳಿ ಕಗ್ಗಂಟು ಸಿಎಂ, ಡಿಸಿಎಂ ಸೆಡ್ಡು

ಬೆಂಗಳೂರು:ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಸುತ್ತುಗಳ ಸಮಾಲೋಚನೆ, ಸಭೆಗಳ ಬಳಿಕವೂ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗುತ್ತಿಲ್ಲ. ಇದೀಗ ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಹೈಕಮಾಂಡ್ ನಡುವಣ ಸಂಘರ್ಷವಾಗಿ ಮಾರ್ಪಟ್ಟಿದೆ.ಹೈಕಮಾಂಡ್ ಕಳುಹಿಸಿರುವ ಪಟ್ಟಿಯಲ್ಲಿ ಕೆಲವು ಅಚ್ಚರಿಯ ಹೆಸರುಗಳು ಕಾಣಿಸಿವೆ ಎನ್ನಲಾಗಿದ್ದು, ಇದನ್ನು ಅಂತಿಮಗೊಳಿಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮತಿಸುತ್ತಿಲ್ಲ. ಈ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಮಾತುಕತೆಯನ್ನೂ […]