ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭೆ ಚುನಾವಣೆ
ಬೆಂಗಳೂರು:ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಮಧ್ಯೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾತನಾಡಿ, ಅವರ (ಸಿದ್ದರಾಮಯ್ಯ) ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಅನುಮಾನ ಬೇಡ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.ನಮ್ಮ ಸರ್ಕಾರ ಬಲಿಷ್ಠವಾಗಿದೆ. ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ನಮ್ಮ ರಾಜ್ಯದ ಮುಖ್ಯಮಂತ್ರಿ. ನಾನು […]







































































































































































































































































































































































































































































































































































































































































































































































































































































































































































































































































































































