ಎಡಿಟಿಂಗ್ ಮಾಸ್ಟರ್ ಸಿದ್ದರಾಮಯ್ಯಬಿಜೆಪಿ ವ್ಯಂಗ್ಯ
ಬೆಂಗಳೂರು:ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿ ಸೃಷ್ಟಿಸುವುದು, ಇದೆಲ್ಲವೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಚೆನ್ನಾಗಿಯೇ ‘ಸಿದ್ದಿ’ಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ರಾಜ್ಯ ಬಿಜೆಪಿ, ನಕಲಿ ಸುದ್ದಿಗಳನ್ನು ರಚಿಸುತ್ತಾ ಕಾಲಹರಣ ಮಾಡುವ ಬದಲು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಸಿಎಂ ಯೋಚಿಸಿದ್ದರೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿರಲಿಲ್ಲ, ಮಹಿಳೆಯರ ಮೇಲೆ ಹಲ್ಲೆ ನಡೆಯುತ್ತಿರಲಿಲ್ಲ ಎಂದು ಉಲ್ಲೇಖಿಸಿದೆ. ಜತೆಗೆ ಎಡಿಟಿಂಗ್ ಮಾಸ್ಟರ್ ಎಂದು ಸಿದ್ದರಾಮಯ್ಯ ಅವರನ್ನು ಕುಹಕವಾಡಿದೆ.ಎಲ್ಲೆಂದರಲ್ಲಿ ನಿದ್ದೆಗೆ […]







































































































































































































































































































































































































































































































































































































































































































































































































































































































































































































































































































































