September 16, 2026

ಸಂಸತ್ ದಾಳಿ: ಮೈಸೂರಿನ ಮನೋರಂಜನ್ ಸೇರಿಐವರಿಗೆ ಮಂಪರು ಪರೀಕ್ಷೆ

ನವದೆಹಲಿ:ಸಂಸತ್ತಿನ ಒಳಗೆ ಹೊಗೆ ಬಾಂಬ್ ಸಿಡಿಸಿ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿರುವ ೬ ಆರೋಪಿಗಳ ಪೈಕಿ ಐವರಿಗೆ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆ ನಡೆಸಲಾಗಿದೆ.ಮೈಸೂರಿನ ಡಿ. ಮನೋರಂಜನ್, ನಾಲ್ವರು ಆರೋಪಿಗಳಾದ ಸಾಗರ್ ಶರ್ಮಾ, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರಿಗೆ ಗುಜರಾತ್ ಗಾಂಧಿನಗರದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಮನೋರಂಜನ್ ಹಾಗೂ ಸಾಗರ್ ಅವರಿಗೆ ಹೆಚ್ಚುವರಿಯಾಗಿ ಟ್ರೈನ್ ಮ್ಯಾಪಿಂಗ್ ಪರೀಕ್ಷೆ ನಡೆಸಲಾಗಿದೆ.ಈ ಪ್ರಕರಣದ ಏಕೈಕ ಮಹಿಳಾ ಆರೋಪಿಯಾಗಿರುವ […]

ರೇಸ್‌ಕೊರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ದಾಳಿ3.47 ಕೋಟಿ ರೂ. ಸೀಜ್

ಬೆಂಗಳೂರು:ಇಲ್ಲಿನ ರೇಸ್‌ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಸೂಕ್ತ ದಾಖಲೆಗಳಿಲ್ಲದ 3.47ಕೋಟಿ ರೂ. ಹಣವನ್ನು ಜಪ್ತಿ ಮಾಡಿರುವ ಘಟನೆ ಬೆಂಗಳೂರು ನಗರದಲ್ಲಿ ತಡರಾತ್ರಿ ನಡೆದಿದೆ.ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್‌ಟಿ ಕಟ್ಟದೇ ವಂಚನೆ ಮಾಡಿದ ಆರೋಪಗಳ ಮೇಲೆ ರೇಸ್‌ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬುಕ್ಕಿಂಗ್ ಕೌಂಟರ್‌ಗಳನ್ನ ಲಾಕ್ ಮಾಡಿದ್ದಾರೆ. ಅಲ್ಲದೇ ಕೌಂಟರ್‌ನಲ್ಲಿನ ಸಿಬ್ಬಂದಿ ಹೊರ ಹೋಗದಂತೆ ತಡೆದು ಪರಿಶೀಲಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ […]

8 ಶಂಕಿತ ಉಗ್ರರ ವಿರುದ್ಧ ಎನ್‌ಐಎ ಚಾರ್ಜ್ಶೀಟ್

ಬೆಂಗಳೂರುರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯ ಮತ್ತು ಆತ್ಮಾಹುತಿ ದಾಳಿ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಘಟನೆ ಲಷ್ಕರ್ ಎ ತೊಯ್ಬಾ ಎಂಟು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ ದೋಷಾರೋಪ ಪಟ್ಟಿ ಸಲ್ಲಿಸಿದೆ. 8 ಮಂದಿಯಲ್ಲಿ 6 ಮಂದಿಯನ್ನ ಬಂಧಿಸಲಾಗಿದ್ದು, ಇನ್ನೂ ಇಬ್ಬರು ಉಗ್ರರು ತಲೆ ಮರೆಸಿಕೊಂಡಿದ್ದಾರೆ ಎಂದು ಚಾರ್ಜ್ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಇವರ ವಿರುದ್ಧ ಉಗ್ರವಾದಕ್ಕೆ ಪಿತೂರಿ, ಆತ್ಮಾಹುತಿ ದಾಳಿ ನಡೆಸಲು ಯೋಜನೆ ರೂಪಿಸಿರುವ ಆರೋಪವಿದೆ.ಈ ಪ್ರಕರಣದ ಪ್ರಮುಖ […]

ಬಿಜೆಪಿ ಟಿಕೆಟ್ ಕೈ ತಪ್ಪಿದಕ್ಕೆ ಸುಮಲತಾ ಮುನಿಸುಬಿ.ವೈ. ವಿಜಯೇಂದ್ರ ಮಾತುಕತೆ ಸಾಧ್ಯತೆ

ಮಂಡ್ಯ:ಲೋಕಸಭಾ ಚುನಾವಣೆಗೆ ಕೆಲವು ತಿಂಗಳು ಮಾತ್ರ ಬಾಕಿ ಇದೆ. ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಮಂಡ್ಯ ಟಿಕೆಟ್ ಜೆಡಿಎಸ್‌ಗೆ ಹೋಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗುವುದು ಡೌಟ್ ಆಗಿದೆ. ಹೀಗಾಗಿ ಅವರು ಪತ್ತೆ ಪಕ್ಷೇತರವಾಗಿ ಸ್ವರ್ಧೆ ಮಾಡಲು ಮುಂದಾಗಿದ್ದಾರೆ. ಸಂಸದೆಯಾದ ನಂತರ ಸುಮಲತಾ ಅವರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಈಗ ಟಿಕೆಟ್ ಸಿಗದಿರೋ ಹಿನ್ನೆಲೆ ಬಿಜೆಪಿ ಮೇಲೆ ಅಸಮಾಧಾನಗೊಂಡಿದ್ದಾರೆ.ಸAಸದೆ […]

ಪ್ರಿಯಕರನೊಂದಿಗೆ ಸರಸಕ್ಕೆ ಅಡ್ಡಿಯಾದ ಪತಿಪ್ರಿಯಕರನಿಂದಲೇ ಕೊಲೆ ಮಾಡಿಸಿದ್ಲು ಪತ್ನಿ

ಬೆಂಗಳೂರು:ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ಮನೆಗೆ ಹೋಗದೇ ಅಯ್ಯಪ್ಪನ ಸನ್ನಿದಿಯಿಂದ ನೇರವಾಗಿ ಪ್ರೇಯಸಿಯನ್ನ ನೋಡಲು ಬೆಂಗಳೂರಿಗೆ ಬಂದಿದ್ದ ಪ್ರೀಯಕರ, ಇದೀಗ ಪ್ರೇಯಸಿಯೊಂದಿಗೆ ಜೈಲುಪಾಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಹೌದು. ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ಬಂದಿದ್ದ ಪ್ರಿಯಕರನೊಂದಿಗೆ ಸರಸವಾಡಲು ಪತಿ ಅಡ್ಡಿಯಾಗಿದ್ದಾನೆ. ಇದರಿಂದ ಆಕ್ರೋಶಗೊಂಡ ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ಪತಿ ವೆಂಕಟನಾಯ್ಕ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿಸಿದ್ದಾಳೆ. ಬಳಿಕ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಿ ಬಾತ್ ರೂಂನಲ್ಲಿ […]

ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ನಟರು

ತಡರಾತ್ರಿ ಪಾರ್ಟಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್ , ಚಿಕ್ಕಣ್ಣ, ಡಾಲಿ ಧನಂಜಯ್ಯ,  ನೀನಾಸಂ ಸತೀಶ್, ಅಭಿಷೇಕ್ ಅಂಬರೀಶ್, ನಿರ್ದೇಶಕ ತರುಣ್ ಸುಧೀರ್ ಹಾಗು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಸುಬ್ರಮಣ್ಯ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ ಮಾಲೀಕರು ಹಾಗೂ ಮ್ಯಾನೇಜರ್ ಮೇಲೆ ಎಫ್.ಐ. ಆರ್ ದಾಖಲಾಗಿತ್ತು. ಪಾರ್ಟಿ ಮಾಡಿದ ನಟರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು ಪೊಲೀಸರು. ಇಂದು ಎಲ್ಲರೂ ಒಟ್ಟಾಗಿ […]

ಹೆಚ್‌ಡಿಕೆಯನ್ನು ಭೇಟಿಯಾಗಿ ಧನ್ಯವಾದ ಹೇಳಿದ ಪ್ರತಾಪ್‌ ಸಿಂಹ

ರಾಮನಗರ: ಲೋಕಸಭಾ ಚುನಾವಣೆ ಹತ್ತಿರ ಹಿನ್ನೆಲೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ತೋಟದ ಮನೆಗೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಧನ್ಯವಾದ ಹೇಳಿದ್ದಾರೆ. ಬಿಡದಿಯ ಕೇತಗಾನಹಳ್ಳಿ ತೋಟದ ಮನೆಗೆ ಆಗಮಿಸಿದ್ದ ಸಂಸದ ಪ್ರತಾಪ್ ಸಿಂಹ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತು ಕೆಲಕಾಲ ಚರ್ಚೆ ನಡೆಸಿದರು.  ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಮರ ಕಡಿದ ಪ್ರಕರಣದಲ್ಲಿ ವಿಕ್ರಂ ಸಿಂಹ ಪರವಾಗಿ ಹೆಚ್ಡಿಕೆ ಬ್ಯಾಟಿಂಗ್ ಮಾಡಿದ್ದರು‌. ಹಾಗಾಗಿ ಇಂದು ಖುದ್ದು ಭೇಟಿಯಾಗಿ ಸಂಸದ ಪ್ರತಾಪ್ ಸಿಂಹ ಧನ್ಯವಾದ ತಿಳಿಸಿದ್ದಾರೆ.  […]

ಅಂಗನವಾಡಿ ಕಾರ್ಯಕರ್ತೆಯಿಂದ ಮತಾಂತರಕ್ಕೆ ಯತ್ನ ಆರೋಪ – ರೊಚ್ಚಿಗೆದ್ದ ಗ್ರಾಮಸ್ಥರು

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಪ್ಪಲದಿನ್ನಿ ತಾಂಡಾದಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಜಯಲಕ್ಷ್ಮಿ ಅಶೋಕ್ ಕುಮಾರ್ ಉಪ್ಪಲದಿನ್ನಿ ತಾಂಡಾದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಈಕೆ ಕೆಲಸ ವೇಳೆ ತಾಂಡಾದ ಜನರ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದಾಳೆ ಎಂದು ಗ್ರಾಮಸ್ಥರಿಂದ ಆರೋಪ ಕೇಳಿಬಂದಿದೆ. ಇದರಿಂದ ರೊಚ್ಚಿಗೆದ್ದು ಗಲಾಟೆ ನಡೆಸಿರುವ ಗ್ರಾಮಸ್ಥರು ವಿಜಯಲಕ್ಷ್ಮಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.  ಗ್ರಾಮಸ್ಥರಿಂದ ವ್ಯಾಪಕವಾಗಿ ದೂರು ಕೇಳಿಬಂದ ನಂತರ ತಹಶೀಲ್ದಾರರು ಹಾಗೂ ಪೊಲೀಸ್‌ ಅಧಿಕಾರಿಗಳು (Police […]

ಯುವ ನಿಧಿಗೆ ಶಿವಮೊಗ್ಗದಲ್ಲಿ ಸಿಎಂ ಚಾಲನೆ

ಶಿವಮೊಗ್ಗ:ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದನೇ ಉಚಿತ ಗ್ಯಾರಂಟಿ ಯೋಜನೆ ಯುವ ನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಚಾಲನೆ ನೀಡಿದರು. ಬಿಜೆಪಿ ಭದ್ರಕೋಟೆ ಶಿವಮೊಗ್ಗದಲ್ಲೇ ಯೋಜನೆಗೆ ಚಾಲನೆ ನೀಡಲಾಗಿದ್ದು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರು, ಪಕ್ಷದ ನಾಯಕರು ಸಮಾರಂಭದಲ್ಲಿ ಹಾಜರಿದ್ದರು. ಯುವ ನಿಧಿ ಯೋಜನೆಗೂ ಚಾಲನೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಐದೂ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದಂತಾಗಿದೆ.ಚಿತ್ರದುರ್ಗ, […]

ನಾನೂ ಅಯೋಧ್ಯೆಗೆ ಹೋಗುತ್ತೇನೆ: ಸಿದ್ದರಾಮಯ್ಯ

ಶಿವಮೊಗ್ಗ:ಜನವರಿ ೨೨ ನಂತರ ನಾನು ಕೂಡ ಅಯೋಧ್ಯೆಗೆ ಹೋಗುತ್ತೇನೆ. ನಮ್ಮ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗ್ತಾರೆ. ಬಿಜೆಪಿಯ ರಾಜಕೀಯ ವಿರೋಧ ಹೊರತು ರಾಮನ ವಿರೋಧಿಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಶ್ರೀರಾಮನಚಂದ್ರನ ವಿರೋಧಿಗಳಲ್ಲ. ನಾವು ಬಿಜೆಪಿ ರಾಜಕಾರಣಕ್ಕೆ ಮಾತ್ರ ವಿರೋಧ. ಶ್ರೀರಾಮನ ಭಕ್ತರು ನಾವು. ಆದರೆ ಇವರು ಶ್ರೀರಾಮನ ರಾಜಕೀಯ ಮಾಡಲು ಹೋಗುತ್ತಿದ್ದಾರೆ. ಅದರ ವಿರುದ್ಧವೇ ಹೊರತು ಶ್ರೀರಾಮನ ವಿರೋಧ ಮಾಡುತ್ತಿಲ್ಲ ಎಂದರು.ಐದನೇ ಗ್ಯಾರೆಂಟಿ ಯೋಜನೆಯನ್ನು ಜಾರಗೊಳಿಸುತ್ತಿದ್ದೇವೆ. ಮತಕ್ಕಾಗಿ […]