September 16, 2026

ಕರವೇ ನಾರಾಯಣಗೌಡ ವಶಕ್ಕೆ ಪಡೆಯಲು೨ ಠಾಣೆಯ ಪೊಲೀಸರ ತಯಾರಿ

ಬೆಂಗಳೂರು:ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ (ಕರವೇ) ನಾರಾಯಣಗೌಡ ಅವರಿಗೆ ಜಾಮೀನು ಮಂಜೂರು ಆದ ಹಿನ್ನೆಲೆಯಲ್ಲಿ ಸೋಮವಾರ ಬಿಡುಗಡೆಯಾಗಲಿದ್ದಾರೆ. ಆದರೆ ನಾರಾಯಣಗೌಡ ಅವರು ಬಿಡುಗಡೆ ಆಗುತ್ತಿದ್ದಂತೆ ವಶಕ್ಕೆ ಪಡೆಯಲು ಎರಡು ಠಾಣೆಯ ಪೊಲೀಸರು ಬಂಧಿಸಲು ಮುಂದಾಗಿದ್ದಾರೆ. ಹೌದು ಹಳೆ ಪ್ರಕರಣಗಳಲ್ಲಿ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲು ಪೊಲೀಸರು ತಯಾರಿ ನಡೆಸಿದ್ದಾರೆ.ಕೊರೊನಾ ಸಮಯದಲ್ಲಿ ರಾಷ್ಟ್ರೀಯ ವಿಪ್ಪತ್ತು ನಿರ್ವಹಣ ಕಾಯ್ದೆಯಡಿ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ವಿಚಾರಣಗೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ವಾರಂಟ್ ಜಾರಿಯಾಗಿತ್ತು. […]

ಯಶ್ ಬರ್ತ್ಡೇಗೆ ಬೃಹತ್ ಕಟೌಟ್ ನಿಲ್ಲಿಸುವಾಗ ವಿದ್ಯುತ್ ಸ್ಪರ್ಶಮೂವರ ದುರ್ಮರಣ

ಗದಗ:ಚಲನಚಿತ್ರ ನಟ ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಜನ ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (21) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ. ಮಧ್ಯರಾತ್ರಿ 1 ಗಂಟೆ ವೇಳೆ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ […]

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾದಾಖಲೆ ಜಯದೊಂದಿಗೆ ಸತತ ೫ನೇ ಬಾರಿಗೆ ಮರು ಆಯ್ಕೆ

ಢಾಕಾ:ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಶೇಖ್ ಹಸೀನಾ ದಾಖಲೆಯ ಜಯ ಸಾಧಿಸಿದ್ದು, ಸತತ 5ನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಈ ಬೆನ್ನಲ್ಲೇ ಪ್ರತಿಪಕ್ಷಗಳು ಈ ಚುನಾವಣೆಯನ್ನು ಬಹಿಷ್ಕರಿಸಿದ್ದು, ವಿರೋಧ ಪಕ್ಷಗಳನ್ನು ಉಗ್ರಗಾಮಿ ಸಂಘಟನೆ ಎಂದು ಪ್ರಧಾನಿ ಟೀಕಿಸಿದ್ದಾರೆ.ಒಟ್ಟು 300 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅವಾಮಿ ಲೀಗ್ ನೇತೃತ್ವದ ಪಕ್ಷವು ಸುಮಾರು 204 ಸ್ಥಾನಗಳನ್ನು ಗೆದ್ದುಕೊಂಡಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಜೊತೆಗೆ ಮಿತ್ರ ಪಕ್ಷವಾದ ಜಾತಿಯಾ ಪಕ್ಷವು 9 ಸ್ಥಾನಗಳನ್ನು […]

ಇಸ್ರೋದಿಂದ ಮತ್ತೊಂದು ಸಾಧನೆಗಮ್ಯಸ್ಥಾನ ತಲುಪಿದ ಆದಿತ್ಯ-ಎಲ್1

ದೆಹಲಿ:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಆದಿತ್ಯ-ಎಲ್ 1, ಇಸ್ರೋದ ಶ್ರೀಹರಿಕೋಟಾ ಲಾಂಚ್‌ಪ್ಯಾಡ್‌ನಿAದ ತನ್ನ ಮಹತ್ವಾಕಾಂಕ್ಷೆಯ ಪ್ರಯಾಣವನ್ನು ಪ್ರಾರಂಭಿಸಿದ ನಾಲ್ಕು ತಿಂಗಳ ನಂತರ ಶನಿವಾರ ತನ್ನ ಅಂತಿಮ ಗಮ್ಯಸ್ಥಾನದ ಕಕ್ಷೆಯನ್ನು ತಲುಪಿದೆ.ಆದಿತ್ಯ ಎಲ್-1 ಅಂತಿಮ ಕಕ್ಷೆ ತಲುಪಿದ ಕೂಡಲೇ ಟ್ವೀಟ್ ಮಾಡಿದ ಇಸ್ರೋ, ನಾನು ಮಾಡಿದ. ನಾನು ಗಮ್ಯ ತಲುಪಿದ್ದೀನಿ. ಆದಿತ್ಯ-ಎಲ್1 ಯಶಸ್ವಿಯಾಗಿ ಎಲ್1 ಬಿಂದುವಿನ ಸುತ್ತ ಹಾಲೋ ಕಕ್ಷೆಯನ್ನು ಪ್ರವೇಶಿಸಿದೆ ಎಂದು ಹೇಳಿದೆ.ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ಭಾರತವು ಮತ್ತೊಂದು ಮೈಲುಗಲ್ಲು […]

ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ

ಬೆಂಗಳೂರು:ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರ ನಿಯೋಗವು ಸಚಿವ ಎಂ.ಸಿ.ಸುಧಾಕರ್ ಹಾಗೂ ಮಾಜಿ ಎಂಎಲ್‌ಸಿ ಪುಟ್ಟಣ್ಣ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಮುಷ್ಕರ ಹಿಂಪಡೆಯಲು ಅತಿಥಿ ಉಪನ್ಯಾಸಕರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದು, ಜೊತೆಗೆ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ ನೀಡಿದ್ದಾರೆ.೨೦೨೩ ಡಿಸೆಂಬರ್ ೨೯ ರಂದು ಅತಿಥಿ ಉಪನ್ಯಾಸಕರ ವೇತನವನ್ನು ೫ ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿತ್ತು. ಆ ಬಗ್ಗೆ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಉನ್ನತ […]

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

ಬೆಂಗಳೂರು:ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳೊಳಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಕೋರಿ ಕಾರ್ಕಳದ ಖಾಸಗಿ ಬಸ್ ನಿರ್ವಾಹಕ ಶರತ್ ಕುಮಾರ್ ಶೆಟ್ಟಿ ಅವರು ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು.‘ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿAದ ಖಾಸಗಿ ಬಸ್ ನಿರ್ವಾಹಕರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ […]

ಸಿದ್ದರಾಮಯ್ಯನವ್ರೆ ನಿಮ್ದೇನು ಸರ್ಕಾರನಾ? ಸರ್ವಾಧಿಕಾರನಾ

ಹುಬ್ಬಳ್ಳಿ:ಕರಸೇವಕ ಶ್ರೀಕಾಂತ್ ಪೂಜಾರಿ ಮೇಲೆ 16 ಕೇಸ್ ಇವೆ ಎಂದು ಯಾವ ಆಧಾರದ ಮೇಲೆ ಹೇಳಿದ್ದೀರಿ? ಸಿದ್ದರಾಮಯ್ಯನವರೇ ನಿಮ್ದೇನು ಸರ್ಕಾರನಾ? ಸರ್ವಾಧಿಕಾರನಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿ ಕಿಡಿಕಾರಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಎಲ್ಲಿದ್ದೀರಿ? ಶ್ರೀಕಾಂತ್ ಮೇಲೆ ಯಾವ ಕೇಸ್ ಇಲ್ಲ. ಜೋಶಿ ಅವರೇನು ಕಾನೂನು ತಜ್ಞರಾ ಎಂದು ಕೇಳಿದ್ದರು. ನಾನು ಕಾನೂನು ತಜ್ಞ ಹೌದೋ ಅಲ್ಲವೋ ನಿಮ್ಮ ಕಡೆ ಕಾನೂನು ತಜ್ಞರು ಇದಾರೋ ಇಲ್ವೋ ಕೇಸ್ ಏನಾಗಿದೆ ಅನ್ನೋದನ್ನ ತಿಳಿದುಕೊಳ್ಳಬೇಕಿತ್ತು. ಈ […]

ಶ್ರೀರಾಮ ನಮ್ಮ ದೇವರು, ಸೀತಾಮಾತೆ ನಮ್ಮ ತಾಯಿ

ಹುಬ್ಬಳ್ಳಿ:ರಾಮನೂ ನಮ್ಮ ದೇವರು, ದುರ್ಗಮ್ಮ, ಗಂಡಿ ದುರ್ಗಮ್ಮ ನಮ್ಮ ದೇವರು, ಸೀತಾಮಾತೆ ನಮ್ಮ ತಾಯಿ ಎಂದು ಸಚಿವ ಸಂತೋಷ್ ಲಾಡ್ ಗುಣಗಾನ ಮಾಡಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ೧೦ ವರ್ಷಗಳಲ್ಲಿ ಹಿಂದೂಗಳಿಗೆ ಏನಾದರೂ ಲಾಭ ಆಗಿದೆಯಾ? ನಾನೂ ಹಿಂದೂ, ನೀವೂ ಹಿಂದೂ ನಮಗೇನಾದರೂ ಲಾಭ ಆಗಿದೆಯಾ? ಇದು ಅವರಿಗಷ್ಟೇ ಲಾಭ ಆಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಶ್ರೀಕಾಂತ್ ಪೂಜಾರಿ ಮೇಲೆ ಕೇಸ್ ಹಾಕಿದ್ರೆ ನಮಗೇನು ಲಾಭ? ಅಷ್ಟೊಂದು ಕೇಸ್‌ಗಳಾಗಿವೆ. ಇನ್ನೊಂದು ಸಲ ಕೋರ್ಟ್ಗೆ ಹೋದ್ರೆ […]

ಅಟ್ಟಾಡಿಸಿ ಮಾರಕಾಸ್ತ್ರಗಳಿಂದ 25 ಬಾರಿ ಇರಿದು ವ್ಯಕ್ತಿಯ ಹತ್ಯೆ

ಬೆಂಗಳೂರು:ವ್ಯಕ್ತಿಯೊಬ್ಬನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ರಾಜ್ಯದ ಗಡಿಭಾಗದ ತಮಿಳುನಾಡಿನ ಸಿಪ್ಕಾಟ್ ಬಳಿಯ ಬೇಗಿಪಲ್ಲಿಯಲ್ಲಿ ನಡೆದಿದೆ.ಬೇಗಿಪಲ್ಲಿಯ ನಿವಾಸಿ ತಿಮ್ಮರಾಜು (36) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಆತನನ್ನು ಮೂವರು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋದ ವೇಳೆ ತಪ್ಪಿಸಿಕೊಳ್ಳಲು ಹೋಟೆಲ್ ಒಂದರ ಒಳಗೆ ಹೋಗಿದ್ದಾನೆ. ದುಷ್ಕರ್ಮಿಗಳು ಆದರೂ ಆತನನ್ನು ಬೆನ್ನಟ್ಟಿ ಮಾರಕಾಸ್ತ್ರಗಳಿಂದ 25 ಬಾರಿ ಚುಚ್ಚಿದ್ದಾರೆ. ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತಿಮ್ಮರಾಜು ಹತ್ಯೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸ್ಥಳಕ್ಕೆ ಸಿಪ್ಕಾಟ್ ಠಾಣೆ […]

ಶ್ರೀಕಾಂತ್ ಪೂಜಾರಿಗೆ ರೌಡಿಶೀಟರ್‌ನಿಂದ ಮುಕ್ತಿ ಕೊಟ್ಟಿದ್ದು ನಮ್ಮ ಸರ್ಕಾರ

ಹುಬ್ಬಳ್ಳಿ:ಕರಸೇವಕ ಶ್ರೀಕಾಂತ್ ಪೂಜಾರಿ ಮೇಲಿನ ರೌಡಿಶೀಟರ್ ಕೇಸ್‌ಗೆ ಮುಕ್ತಿ ಕೊಟ್ಟಿದ್ದೇ ಕಾಂಗ್ರೆಸ್ ಸರ್ಕಾರ. ಈಗ ಕೋರ್ಟ್ ಆದೇಶ ಇದ್ದಿದ್ದರಿಂದ ಆತನನ್ನು ಬಂಧಿಸಲಾಗಿತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಶ್ರೀಕಾಂತ್ ಪೂಜಾರಿ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಶ್ರೀಕಾಂತ್ ಪೂಜಾರಿ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ನಮಗೆ ಶ್ರೀಕಾಂತ್ ಪೂಜಾರಿ ಯಾgರು ಎನ್ನುವುದೇ ಗೊತ್ತಿಲ್ಲ. ಆತನಿಗಾಗಿ ಸುಮ್ಮನೆ ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಕೇಂದ್ರದಿAದ ಬರುವ ಜಿಎಸ್‌ಟಿಯ ಬಂದಿಲ್ಲ, ಆ ಹಣಕ್ಕಾಗಿ ಹೋರಾಟ […]