ಸಿದ್ದರಾಮಯ್ಯ, ಡಿಕೆಶಿ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್ ಅಂತ್ಯವಾಗುತ್ತೆ
ಬೆಂಗಳೂರು:ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಅಂತ್ಯ ಕಾಣುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭವಿಷ್ಯ ನುಡಿದಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನನಗೆ ಇವರು ಹೇಳ್ತಾರೆ. ಇವತ್ತು ಹೇಳ್ತೀನಿ ಕರ್ನಾಟಕದಲ್ಲಿ ಇವರು ಅಂತ್ಯ ಕಾಣ್ತಾರೆ. ನಾವು ಸೋಲಿಸಿಯೇ ಸೋಲಿಸ್ತೀವಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಅಂತ್ಯ ಕಾಣುತ್ತೆ ಎಂದರು.ಅಲ್ಲಿ ಮೋದಿ ಅವರು ಶ್ರೀರಾಮ ಅಂತಾರೆ. ಉಪವಾಸ, ನದಿ ಸ್ನಾನ ಇವೆಲ್ಲ ಮಾಡ್ತಾರೆ. ಇಲ್ಲಿ ಇವರಿಗೆ ಸಿದ್ದರಾಮ ಮಾತ್ರ. ಸಿದ್ದರಾಮ ಹೆಸರಿನಲ್ಲಿ […]







































































































































































































































































































































































































































































































































































































































































































































































































































































































































































































































































































































