September 16, 2026

ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಬೆಂಬಲಿಗರಿAದ ದಾಳಿ

ಕ್ಯಾಲಿಫೋರ್ನಿಯಾ:ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಬೆಂಬಲಿಗರು ಮತ್ತೆ ದಾಳಿ ನಡೆಸಿದ್ದಾರೆ. ದೇವಸ್ಥಾನದ ಫಲಕಕ್ಕೆ ಕಪ್ಪು ಬಣ್ಣ ಬಳಿಯಲಾಗಿದೆ, ದೇವಾಲಯವನ್ನು ಅಪವಿತ್ರಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶೇರಾವಾಲಿ ದೇವಾಲಯವು ಕ್ಯಾಲಿಫೋರ್ನಿಯಾದ ಹೇವರ್ಡ್ ನಗರದಲ್ಲಿದೆ. ಅದೇ ಪ್ರದೇಶದಲ್ಲಿ ಸ್ವಾಮಿನಾರಾಯಣ ದೇವಸ್ಥಾನವೂ ಇದ್ದು, ಎರಡು ವಾರಗಳ ಹಿಂದೆ ಖಾಲಿಸ್ತಾನ್ ಬೆಂಬಲಿಗರು ಇದೇ ರೀತಿ ದಾಳಿ ನಡೆಸಿದ್ದರು.ಹಿಂದೂ ಅಮೇರಿಕನ್ ಫೌಂಡೇಶನ್ ಸಹ ಸಾಮಾಜಿಕ ಮಾಧ್ಯಮದಲ್ಲಿ ಬರಹದ ಚಿತ್ರವನ್ನು ಹಂಚಿಕೊAಡಿದೆ. ಫೌಂಡೇಶನ್ ಘಟನೆಗೆ ಸಂಬAಧಿಸಿದAತೆ ಪೊಲೀಸರೊಂದಿಗೆ ಸಂಪರ್ಕದಲ್ಲಿದೆ ಖಾಲಿಸ್ತಾನ್ ಬೆಂಬಲಿಗರು ಮತ್ತು […]

ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ ಹೋರಾಟಸರ್ಕಾರದಿಂದಲೇ ಕೇಸ್‌ಗೆ ಮರುಜೀವ?

ಹುಬ್ಬಳ್ಳಿ:31 ವರ್ಷದ ಬಳಿಕ ರಾಮಜನ್ಮಭೂಮಿ ಹೋರಾಟದ ಪ್ರಕರಣಕ್ಕೆ ಸರ್ಕಾರ ಉದ್ದೇಶಪೂರ್ವಕವೇ ಮರುಜೀವ ನೀಡಿದೆ ಎಂಬ ಗಂಭೀರ ಆರೋಪ ಈಗ ಕೇಳಿ ಬಂದಿದೆ.ಡಿಸೆAಬರ್ ಮೊದಲ ವಾರದಿಂದಲೇ 1992 ಪ್ರಕರಣದ ಆರೋಪಿಗಳ ಮಾಹಿತಿ ಪೋಲಿಸರು ಮುಂದಾಗಿದ್ದರು ಎಂಬ ವಿಚಾರ ಈಗ ಪತ್ತೆಯಾಗಿದೆ.ಇದೊಂದು ಸಾಮಾನ್ಯ ಕೇಸ್ ಎಂದು ಸರ್ಕಾರ ಮತ್ತು ಪೊಲೀಸರು ಹೇಳುತ್ತಿದ್ದಾರೆ. ಹಳೇ ಪ್ರಕರಣಗಳನ್ನು ಇತ್ಯರ್ಥಗೊಳಿಸುವಾಗ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಈ ಸಂದರ್ಭದ ವೇಳೆ ಬಂಧನವಾಗಿದ್ದು ಕಾಕಾತಾಳೀಯ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದ್ದರು. ಸರ್ಕಾರ ಏನೇ ಹೇಳಿದ್ದರೂ […]

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಚಿವರ ಡಿನ್ನರ್ ಪಾಲಿಟಿಕ್ಸ್

ಬೆಂಗಳೂರು:ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ ಸಭೆ ಮಹತ್ವದ ಸಭೆ ನಡೆದಿದ್ದು ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುನ್ನಲೆಗೆ ಬರುತ್ತಾ ಹೆಚ್ಚುವರಿ ಡಿಸಿಎಂ ಕೂಗು ಎಂಬ ಪ್ರಶ್ನೆ ಬಂದಿದೆ.ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್, ಹೆಚ್.ಸಿ ಮಹದೇವಪ್ಪ, ಕೆ.ಎನ್. ರಾಜಣ್ಣ, ದಿನೇಶ್ ಗುಂಡೂರಾವ್, ಕೆ.ಹೆಚ್. ಮುನಿಯಪ್ಪ ಅವರು ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದ್ದಾರೆ.ಈ ಆರು ಸಚಿವರ ಸಭೆಯಲ್ಲಿ ಎರಡು ಪ್ರಮುಖ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಚಿವರ ಲೋಕಸಭೆ ಸ್ಪರ್ಧೆಮಾಡಿದರೆ ಗೆಲುವು ಅನಿವಾರ್ಯ. ಗೆಲುವು ಅನಿವಾರ್ಯವಾಗಬೇಕಾದರೆ ಸಮುದಾಯಗಳ […]

ನಾನೂ ರಾಮಭಕ್ತ, ಇದರಲ್ಲಿ ರಾಜಕೀಯ ಬೇಡ

ರಾಮನಗರ:ಅತ್ತ ರಾಮಮಂದಿರ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಡುವೆ ಧರ್ಮಯುದ್ಧ ನಡೆಯುತ್ತಿದ್ದರೆ ಇತ್ತ ರಾಮನಗರದ ಕೈ ಶಾಸಕರೊಬ್ಬರು ರಾಮೋತ್ಸವದ ಜಪ ಮಾಡಿದ್ದಾರೆ. ನಾನು ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.ರಾಮಮಂದಿರ ಉದ್ಘಾಟನೆ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ ಎಂಬ ಕುರಿತು ಮಾತನಾಡಿದ ಅವರು, ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ವಿ. ಅದನ್ನ ಭಕ್ತಿ ಪೂರ್ವಕವಾಗಿ ಮಾಡಿಯೇ ಮಾಡ್ತೀವಿ. ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನ ಪೂಜಿಸ್ತೇನೆ ಎಂದರು.ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ […]

ರಾಮಮಂದಿರಕ್ಕೂ, ಭಕ್ತರಿಗೂ ರಕ್ಷಣೆ ಬೇಕು: ಡಿ.ಕೆ.ಸುರೇಶ್

ರಾಮನಗರ:ಗೋಧ್ರಾ ಮಾದರಿ ಮತ್ತೊಂದು ದುರಂತ ಸಂಭವಿಸಬಹುದು ಎಂಬ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆಯನ್ನ ಸಂಸದ ಡಿ.ಕೆ.ಸುರೇಶ್ ಸಮರ್ಥಿಸಿಕೊಂಡಿದ್ದಾರೆ.ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಅಯೋಧ್ಯೆ ವಿವಾದಾತ್ಮಕ ಕ್ಷೇತ್ರ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಆಗಿದೆ. ರಾಮಮಂದಿರಕ್ಕೂ ರಕ್ಷಣೆ ಬೇಕು, ಭಕ್ತರಿಗೂ ರಕ್ಷಣೆ ಕೊಡಬೇಕು. ಏನೇ ಇದ್ರೂ ರಕ್ಷಣೆ ಕೊಡುವುದು ಸರ್ಕಾರದ ಕರ್ತವ್ಯ. ಆ ದೃಷ್ಟಿಯಿಂದ ಹರಿಪ್ರಸಾದ್ ಅವರು ಹೇಳಿದ್ದಾರೆ ಎಂದು ತಿಳಿಸಿದರು.ಕರಸೇವಕರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ವಿಚಾರ ಕುರಿತು ಮಾತನಾಡಿ, ಯಾರನ್ನೂ […]

ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ

ಬೆಂಗಳೂರು:ಸಿಎಂ ಸಿದ್ದರಾಮಯ್ಯ, ಎಂಎಲ್‌ಸಿ ಃಏ ಹರಿಪ್ರಸಾದ್ ಮತ್ತು ಮಾಜಿ ಶಾಸಕ ಯತೀಂದ್ರ ಒಂದೊAದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಕೆ ಹರಿಪ್ರಸಾದ್ ಅವರಿಗೆ ಮಾಹಿತಿ ಇದ್ದರೆ ಗೃಹ ಇಲಾಖೆಗೆ ಕೊಡಲಿ. ದಾಖಲೆ ಕೊಡಿ, ನಮಗೂ ಕೊಡಿ ಮಾಧ್ಯಮಗಳಿಗೆ ಕೊಡಿ ಎಂದು ಹೇಳಿದ್ದಾರೆ.ಜಗದೀಶ್ ಶೆಟ್ಟರ್ ನಾನು ದುಡ್ಡು ಕೊಟ್ಟಿದ್ದೇನೆ ಅಂತಾ ಹೇಳಿದ್ದಾರೆ. ಶೆಟ್ಟರ್‌ಗಿಂತಲೂ ನಾನು ಹೆಚ್ಚು […]

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ

ಬೆಂಗಳೂರು:ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ ಎಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರದಲ್ಲೂ ನಾನು, ನಮ್ಮ ಕುಟುಂಬದ ಸದಸ್ಯರು ಯಾರೂ ಸ್ಪರ್ಧಿಸುವುದಿಲ್ಲ. ಈ ಬಾರಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ. ಈ ಬಗ್ಗೆ ಹೈಕಮಾಂಡ್ ಏನು ಹೇಳುತ್ತದೋ ನೋಡೋಣ ಎಂದು ಹೇಳಿದರು.ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಲೋಕಸಭಾ […]

ಶ್ರೀಕಾಂತ್ ಪೂಜಾರಿ ರಾಮಭಕ್ತನ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್

ಬೆಂಗಳೂರು:ಹುಬ್ಬಳ್ಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿ ಹಾಗೂ ಇತರರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದೆ. ಈ ಮಧ್ಯೆ, ಬಿಜೆಪಿ ಪ್ರತಿಭಟನೆಯ ಬೆಂಕಿಗೆ ತುಪ್ಪ ಸುರಿಯುವಂಥ ಹೇಳಿಕೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಶ್ರೀಕಾಂತ್ ಪೂಜಾರಿ ಶ್ರೀರಾಮ ಅಥವಾ ಶ್ರೀಕೃಷ್ಣನಂತೆ ಆದರ್ಶ ಪುರುಷ ಅಲ್ಲ. ರಾಮಭಕ್ತನ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್ ಎಂದು ಟೀಕಿಸಿದ್ದಾರೆ.‘ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ […]

ಹಿಂದೂಗಳು ದರ್ಬಲಗೊಂಡರೆ ಮತ್ತೊಂದು ಪಾಕ್ ಸೃಷ್ಟಿ

ಚಿಕ್ಕಮಗಳೂರು:ಹಿಂದೂಗಳನ್ನು ದುರ್ಬಲಗೊಳಿಸುವುದು, ಹಿಂದೂಗಳನ್ನು ಒಡೆದಾಳುವ ನೀತಿ ಕಾಂಗ್ರೆಸ್‌ನದ್ದಾಗಿದೆ. ಇದು ಮತ್ತೊಂದು ಪಾಕಿಸ್ತಾನ ಹಾಗೂ ಆಫ್ಘಾನಿಸ್ಥಾನದ ನಿರ್ಮಾಣಕ್ಕೆ ಕಾರಣವಾಗಲಿದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ, ಒಂದು ಕಾಲದಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ಇವು ಅಖಂಡ ಭಾರತದ ಭಾಗವಾಗಿದ್ದವು. ಗಾಂಧಾರಿಯ ತವರು ಮನೆ ಆಫ್ಘಾನಿಸ್ತಾನವಾಗಿತ್ತು. ಅಲ್ಲಿ ನೂರಕ್ಕೆ ನೂರು ಜನ ಹಿಂದೂಗಳಿದ್ದರು. ಈಗ ಮತ್ತೆ ಭಾರತದಲ್ಲಿ ಹಿಂದೂಗಳ ಸಂಖ್ಯೆ […]

ಫೆ.29 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ

ಬೆಂಗಳೂರು:ಮುಖ್ಯಮAತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಜರುಗಿದ ಸಂಘಟನಾ ಸಮಿತಿ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು.ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯನ್ನು ಫೆಬ್ರವರಿ 29ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಲಾಗಿದೆ ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ […]